ಮಾಲೂರು: ತಾಲ್ಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ 2022-27ನೇ ಸಾಲಿಗೆ ಆಯ್ಕೆಯಾಗಿರುವ ನಿರ್ದೇಶಕರು, ಸಂಘದ ಪದಾಧಿಕಾರಿಗಳ ಹುದ್ದೆಗಳಿಗೆ ಜುಲೈ 9ರಂದು ನಡೆಯಲಿರುವ ಚುನಾವಣೆಗೆ ಗುರುವಾರ ನಾಮಪತ್ರ ಸಲ್ಲಿಸಿದರು.
ಇತ್ತೀಚೆಗೆ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಏಳು ನಿರ್ದೇಶಕರ ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಮಾಜಿ ಅಧ್ಯಕ್ಷರಾದ ವೆಂಕಟಪ್ಪ ಹಾಗೂ ಕೆಂಪಣ್ಣ ತಂಡದ 6 ನಿರ್ದೇಶಕರು ಹಾಗೂ ಟಿ. ವೆಂಕಟಸ್ವಾಮಿ ಬಣದಿಂದ ಟಿ. ವೆಂಕಟಸ್ವಾಮಿ ಸೇರಿದಂತೆ ನಿರ್ದೇಶಕರು ಆಯ್ಕೆಯಾಗಿದ್ದರು.
ರಾಜ್ಯ ಪರಿಷತ್ ಸ್ಥಾನಕ್ಕೆ ಸಿ. ಶಶಿಧರ್, ಅಧ್ಯಕ್ಷ ಸ್ಥಾನಕ್ಕೆ ಎಂ.ಆರ್. ಜಯಂತಿ, ಉಪಾಧ್ಯಕ್ಷ ಸ್ಥಾನಕ್ಕೆ ಎಂ. ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಎಂ. ರಾಮಯ್ಯ, ಖಜಾಂಚಿ ಸ್ಥಾನಕ್ಕೆ ಎಲ್. ಶ್ರೀನಿವಾಸ್, ಸಹ ಕಾರ್ಯದರ್ಶಿ ಸ್ಥಾನಕ್ಕೆ ಎನ್. ಮಮತಾ ಅವರು, ಚುನಾವಣಾಧಿಕಾರಿ ಡಿ.ವಿ. ಮುನಿಯಪ್ಪ ಅವರಿಗೆ ನಾಮಪತ್ರ
ಸಲ್ಲಿಸಿದರು.
ಒಂದೊಂದು ಹುದ್ದೆಗೆ ಒಬ್ಬರೇ ನಾಮಪತ್ರ ಸಲ್ಲಿಸಿರುವುದರಿಂದ ಎಲ್ಲಾ ಸ್ಥಾನಗಳಿಗೂ ಅವಿರೋಧವಾಗಿ ಆಯ್ಕೆಯಾಗುವುದು ಖಚಿತಗೊಂಡಿದೆ. ಚುನಾವಣಾಧಿಕಾರಿ ಅವರು ಶನಿವಾರದಂದು ಪದಾಧಿಕಾರಿಗಳ ಆಯ್ಕೆಯನ್ನು ಅಧಿಕೃತವಾಗಿ ಘೋಷಿಸಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.