ಮುಳಬಾಗಿಲು: ನಗರದ ಹೃದಯ ಭಾಗದಲ್ಲಿ ಪಾಳುಬಿದ್ದಿದ್ದ ತಾಲ್ಲೂಕು ಪಂಚಾಯಿತಿ ಸಂಕೀರ್ಣ ಹಾಗೂ ಹಳೇ ನ್ಯಾಯಾಲಯ ಕಟ್ಟಡಗಳ ಸ್ಥಳವನ್ನು ಕೋವಿಡ್ ರೋಗಿಗಳಿಗೆ ಬಳಕೆ ಮಾಡಲು ತಾಲ್ಲೂಕು ಆಡಳಿತ ನಿರ್ಧರಿಸಿದೆ.
ಸಂಕೀರ್ಣ ಪಾಳು ಬಿದ್ದಿದ್ದು ಸಾರ್ವಜನಿಕರ ಉಪಯೋಗಕ್ಕೆ ಇಲ್ಲವಾಗಿದೆ ಎಂದು ‘ಪ್ರಜಾವಾಣಿ’ಯಲ್ಲಿ ಏ.30ರಂದು ಪ್ರಕಟವಾಗಿತ್ತು. ಇದಕ್ಕೆ ತಾಲ್ಲೂಕು ಆಡಳಿತ ಸ್ಪಂದಿಸಿ, ನಗರಸಭೆಗೆ ಸ್ಥಳವನ್ನು ಸ್ವಚ್ಛಗೊಳಿಸಲು ಸೂಚಿಸಿದೆ.
ಶಾಸಕ ಎಚ್.ನಾಗೇಶ್ ಅವರು ಈಚೆಗೆ ನಡೆದ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಈ ಕಟ್ಟಡವನ್ನು ತಕ್ಷಣಕ್ಕೆ ಕೋವಿಡ್ಸಂತ್ರಸ್ತರಿಗೆ ಉಪಯೋಗಿಸಿಕೊಳ್ಳಲು ಹೇಳಿದ್ದರು. ಈ ಹಿನ್ನೆಲೆಯಲ್ಲಿ ನಗರಸಭೆ ಪೌರಕಾರ್ಮಿಕರು ಬುಧವಾರ ಬೆಳಿಗ್ಗೆ ವಾಣಿಜ್ಯ ಸಂಕೀರ್ಣವನ್ನು ಸ್ವಚ್ಛಗೊಳಿಸುವ ಕೆಲಸ ಆರಂಭಿಸಿದ್ದಾರೆ ಎಂದು ತಹಶೀಲ್ದಾರ್ ಕೆ.ಎನ್.ರಾಜಶೇಖರ್ ತಿಳಿಸಿದ್ದಾರೆ.
ನಗರಸಭೆ ಅಧ್ಯಕ್ಷ ರಿಯಾಜ್ ಅಹಮದ್, ಪೌರಾಯುಕ್ತ ಜಿ.ಶ್ರೀನಿವಾಸಮೂರ್ತಿ ಸ್ಥಳಕ್ಕೆ ಭೇಟಿ ನೀಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.