ಮುಳಬಾಗಿಲು: ನಗರದ ಪುರಾಣ ಪ್ರಸಿದ್ಧ ಆಂಜನೇಯ ಸ್ವಾಮಿ ದೇವಾಲಯ ಮತ್ತು ತಾಲ್ಲೂಕಿನ ಕುರುಡುಮಲೆ ಗ್ರಾಮದ ವಿನಾಯಕ ದೇವಾಲಯಗಳನ್ನು ಸೋಮವಾರ ಬೆಳಿಗ್ಗೆ ಭಕ್ತರ ದರ್ಶನಕ್ಕೆ ತೆರೆಯಲು ಸುರಕ್ಷತಾ ಕಾರ್ಯಕ್ರಮಗಳನ್ನು ಕೈಗೊಳ್ಳಲಾಯಿತು.
ಸರ್ಕಾರದ ನಿರ್ದೇಶನದಂತೆ ಬೆಳಿಗ್ಗೆಯಿಂದ ಸಂಜೆವರೆಗೂ ಭಕ್ತರು ದೇವರ ದರ್ಶನ ಪಡೆಯಬಹುದೆಂದು ತಾಲ್ಲೂಕು ಮುಜರಾಯಿ ಇಲಾಖೆ ಅಧಿಕಾರಿ ತಹಶೀಲ್ದಾರ್ ಕೆ.ಎನ್.ರಾಜಶೇಖರ್ ತಿಳಿಸಿದರು.
ದೇವಾಲಯ ತೆಗೆಯುವ ಕುರಿತು ಅವಶ್ಯಕ ಕ್ರಮಗಳನ್ನು ವೀಕ್ಷಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.