ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ನಾಗಾಲೋಟ ಮುಂದುವರಿದಿದ್ದು, ಹೊಸದಾಗಿ 541 ಮಂದಿಗೆ ಸೋಂಕು ತಗುಲಿರುವುದು ಶನಿವಾರ ದೃಢಪಟ್ಟಿದೆ. ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ 1,825ಕ್ಕೆ ಏರಿಕೆಯಾಗಿದೆ.
ಸೋಂಕು ಹರಡುವಿಕೆ ಪ್ರಮಾಣ ಏರು ಗತಿಯಲ್ಲೇ ಸಾಗಿದ್ದು, ಶುಕ್ರವಾರ ಸಹ 502 ಮಂದಿಗೆ ಸೋಂಕು ಹರಡಿತ್ತು. ಸೋಂಕು ಹರಡುವಿಕೆಯ ಆಟಾಟೋಪಕ್ಕೆ ಆರೋಗ್ಯ ಇಲಾಖೆ ಬೆಚ್ಚಿಬಿದ್ದಿದೆ. ಮತ್ತೊಂದೆಡೆ ಕೋವಿಡ್ 3ನೇ ಅಲೆ ಭೀತಿಗೆ ಜಿಲ್ಲೆಯ ಜನ ಆತಂಕಗೊಂಡಿದ್ದಾರೆ.
ಕೋಲಾರ ತಾಲ್ಲೂಕಿನ 179 ಮಂದಿಗೆ, ಮಾಲೂರು ತಾಲ್ಲೂಕಿನ 115 ಮಂದಿಗೆ, ಬಂಗಾರಪೇಟೆ ತಾಲ್ಲೂಕಿನ 58 ಮಂದಿಗೆ, ಕೆಜಿಎಫ್ ತಾಲ್ಲೂಕಿನ 102 ಮಂದಿಗೆ, ಮುಳಬಾಗಿಲು ತಾಲ್ಲೂಕಿನ 44 ಮಂದಿಗೆ, ಶ್ರೀನಿವಾಸಪುರ ತಾಲ್ಲೂಕಿನ 43 ಮಂದಿಗೆ ಸೋಂಕು ಬಂದಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ.
ಜಿಲ್ಲಾ ಕೇಂದ್ರದ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 92 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 40 ಮಂದಿ, ಮಾಲೂರು ತಾಲ್ಲೂಕಿನ 10, ಬಂಗಾರಪೇಟೆ ತಾಲ್ಲೂಕಿನ 7, ಕೆಜಿಎಫ್ ತಾಲ್ಲೂಕಿನ 11, ಮುಳಬಾಗಿಲು ತಾಲ್ಲೂಕಿನ 23 ಮಂದಿ ಹಾಗೂ ಹೊರ ಜಿಲ್ಲೆಯ ಒಬ್ಬರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.