ಮುಳಬಾಗಿಲು: ನಗರದ ಟೀಚರ್ಸ್ ಕಾಲೊನಿ ಮತ್ತು ಶಿವಕೇಶವನಗರದ ಮಧ್ಯೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯಿಂದ ಆಗುತ್ತಿದ್ದ ಅಪಾಯ ತಪ್ಪಿಸಿದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರ ಸುಬ್ರಮಣಿ ಅವರ ಸಮಯಪ್ರಜ್ಞೆ ನಾಗರಿಕರ ಮೆಚ್ಚುಗೆಗೆ ಪಾತ್ರವಾಗಿದೆ.
ಸುಬ್ರಮಣಿ ಅವರ ಮನೆಯ ರಸ್ತೆಯಲ್ಲಿ ಗುರುವಾರ ವಿದ್ಯುತ್ ತಂತಿ ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ತಂತಿಯಲ್ಲಿ ವಿದ್ಯುತ್ ಪ್ರವಹಿಸುತ್ತಿರುವ ಬಗ್ಗೆ ಅವರು ರಸ್ತೆಯಲ್ಲಿ ನಡೆದಾಡುವವರಿಗೆ ಎಚ್ಚರಿಕೆ ನೀಡಿದರು. ಇದರಿಂದ ಭಾರೀ ಅನಾಹುತ ತಪ್ಪಿತು.
ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಬೆಸ್ಕಾಂ ಸಿಬ್ಬಂದಿ ವಿದ್ಯುತ್ ತಂತಿಯನ್ನು ತೆರವುಗೊಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.