ADVERTISEMENT

ಕ್ವಾರಂಟೈನ್‌ ಉಲ್ಲಂಘನೆ: ದೂರು ದಾಖಲು

​ಪ್ರಜಾವಾಣಿ ವಾರ್ತೆ
Published 30 ಜೂನ್ 2020, 9:27 IST
Last Updated 30 ಜೂನ್ 2020, 9:27 IST

ಕೆಜಿಎಫ್‌: ಹೋಂ ಕ್ವಾರಂಟೈನ್‌ಗೆ ಒಳಗಾದ ಇಬ್ಬರು ಸರ್ಕಾರದ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಸಾರ್ವಜನಿಕ ರಸ್ತೆಗಳಲ್ಲಿ ಓಡಾಡುತ್ತಿದ್ದಾರೆ ಎಂದು ತಾಲ್ಲೂಕು ವೈದ್ಯಾಧಿಕಾರಿ ಇಬ್ಬರು ನಿವಾಸಿಗಳ ವಿರುದ್ಧ ಪೊಲೀಸರಿಗೆ ಸೋಮವಾರ ದೂರು ನೀಡಿದ್ದಾರೆ.

ಆಂಡರಸನ್‌ಪೇಟೆಯ ಕಿರಣ್‌ ಮತ್ತು ಆಯಿಷ ಎಂಬುವರು ಕೋವಿಡ್‌–19 ಸಂಪರ್ಕ ಇರುವ ವ್ಯಕ್ತಿಗಳೊಂದಿಗೆ ಸಂಪರ್ಕ ಹೊಂದಿದ್ದರು. ಅವರನ್ನು ಜೂನ್ 24 ರಿಂದ ಕ್ವಾರಂಟೈನ್‌ಗೆ ಒಳಪಡಿಸಿ, ಮನೆ ಬಿಟ್ಟು ಬೇರೆ ಸ್ಥಳಗಳಲ್ಲಿ ಓಡಾಡಬಾರದು ಎಂದು ಸೂಚಿಸಲಾಗಿತ್ತು.

ಆದರೂ ಇವರು ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಎಲ್ಲೆಡೆ ತಿರುಗಾಡುತ್ತಿದ್ದರು. ಈ ಸಂಬಂಧವಾಗಿ ನೋಟಿಸ್ ಸಹ ನೀಡಲಾಗಿತ್ತು. ನೋಟಿಸನ್ನು ಲೆಕ್ಕಿಸದೆ ಸಾರ್ವಜನಿಕ ಪ್ರದೇಶದಲ್ಲಿ ಓಡಾಡಿ, ಕರ್ನಾಟಕ ಸಾಂಕ್ರಾಮಿಕ ರೋಗಗಳ ಕೋವಿಡ್‌ 19 ನಿಯಂತ್ರಣ ನಿಯಮಾವಳಿ 2020ರ ಪ್ರಕಾರ ಕಾನೂನನ್ನು ಉಲ್ಲಂಘನೆ ಮಾಡಿದ್ದಾರೆ ಎಂಬ ಕಾರಣಕ್ಕಾಗಿ ತಾಲ್ಲೂಕು ವೈದ್ಯಾಧಿಕಾರಿ ಡಾ.ವಿಶ್ವನಾಥರೆಡ್ಡಿ ಆಂಡರಸನ್‌ಪೇಟೆ ಪೊಲೀಸರಿಗೆ ದೂರು ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.