ಮುಳಬಾಗಿಲು: ತಾಲ್ಲೂಕಿನ ಆವಣಿ ರಸ್ತೆಯಲ್ಲಿ ಶುಕ್ರವಾರ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ.
ಸರಸಮ್ಮ(26) ಮೃತಪಟ್ಟವರು. ರಾಧಾಕೃಷ್ಣ ಮತ್ತು ಸಂತೋಷ್ ಗಾಯಗೊಂಡಿದ್ದು, ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ.
ನೆರೆಯ ಆಂಧ್ರಪ್ರದೇಶದ ಶಿವಕುರುಬೂರು ಗ್ರಾಮದ ವಾಸಿಗಳಾದ ಇವರು ತಾಲ್ಲೂಕಿನ ಕಾಂತರಾಜ ಸರ್ಕಲ್ ಬಳಿ ಶನಿಮಹಾತ್ಮ ದೇವರ ಗುಡಿಗೆ ಪೂಜೆ ಸಲ್ಲಿಸಲು ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಮುಳಬಾಗಿಲು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.