ಗಂಗಾವತಿ: ತಾಲ್ಲೂಕಿನ ಶ್ರೀರಾಮನಗರದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶಿಕ್ಷಾರ್ಥಿಗಳು ಭಾನುವಾರ ಪಥಸಂಚಲನ ನಡೆಸಿದರು. ಗ್ರಾಮ ಪಂಚಾಯಿತಿ ಹಿಂದಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಿಂದ ಆರಂಭವಾದ ಪಥ ಸಂಚಲನ ಗ್ರಾಮದ ಪ್ರಮುಖ ವೃತ್ತ, ರಸ್ತೆಗಳಲ್ಲಿ ಸಂಚರಿಸಿತು. ಬಳಿಕ ಕೊಪ್ಪಳ ಹೈದರಬಾದ್ ರಾಜ್ಯ ಹೆದ್ದಾರಿಯಲ್ಲಿ ಶಿಕ್ಷಾರ್ಥಿಗಳು ಪಥಸಂಚಲನ ನಡೆಸಿದರು.
ಗ್ರಾಮದಲ್ಲಿ ಮೊದಲ ಬಾರಿಗೆ ನಡೆದ ಪಥಸಂಚಲಕ್ಕೆ ನಾಗರಿಕರು ಉತ್ತಮ ರೀತಿಯಲ್ಲಿ ಸ್ಪಂದಿಸಿದ್ದರು. ಪಥ ಸಂಚಲನ ನಡೆಯುವ ರಸ್ತೆಯುದ್ದಕ್ಕೂ ಇಕ್ಕೆಲುಗಳಲ್ಲಿ ನಿಂತ ಮಹಿಳೆಯರು, ಮಕ್ಕಳು ಹಾಗೂ ವಿವಿಧ ಸಂಘಟನೆಗಳ ಪುಷ್ಪ ಎರಚಿ ಸ್ವಾಗತಿಸಿದರು.
ಸಂಸದ ಕರಡಿ ಸಂಗಣ್ಣ, ಮಾಜಿ ಸಂಸದ ಶಿವರಾಮಗೌಡ, ಮಾಜಿ ಶಾಸಕ ಪರಣ್ಣ ಮುನವಳ್ಳಿ ಮುಖಂಡರಾದ ದಢೇಸ್ಗೂರು ಬಸವರಾಜ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಿಂಗನಾಳ ವಿರೂಪಾಕ್ಷಪ್ಪ, ದುರ್ಗಾರಾವ್, ಕೆ. ಶ್ರೀನಿವಾಸ, ಎಂ.ಜೆ. ರವಿಕುಮಾರ, ಅನ್ನೇ ಚಂದ್ರಶೇಖರ, ಸತ್ಯನಾರಾಯಣ ದೇಶಪಾಂಡೆ, ಮುಳ್ಳಪೂಡಿ ಶ್ರೀನಿವಾಸ ಇತರರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.