ADVERTISEMENT

ಎಸ್‌ಪಿ ವರ್ಗಾವಣೆ

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2018, 10:53 IST
Last Updated 13 ಮಾರ್ಚ್ 2018, 10:53 IST
ಡಾ.ಅನೂಪ್‌ ಎ.ಶೆಟ್ಟಿ
ಡಾ.ಅನೂಪ್‌ ಎ.ಶೆಟ್ಟಿ   

ಕೊಪ್ಪಳ: ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಅನೂಪ್‌ ಎ.ಶೆಟ್ಟಿ ಅವರನ್ನು 8 ತಿಂಗಳಲ್ಲೇ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಅವರನ್ನು ರಾಜ್ಯ ಗುಪ್ತದಳದ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

ಅನೂಪ್‌ ಶೆಟ್ಟಿ ಜಿಲ್ಲೆಗೆ ಬಂದ ಕೆಲವೇ ಸಮಯದಲ್ಲಿ ಅಕ್ರಮ ಮರಳುಗಾರಿಕೆ, ಮದ್ಯ ಮಾರಾಟ, ಕೋಮು ಗಲಭೆಯಂಥ ಸೂಕ್ಷ್ಮ ಪ್ರಕರಣಗಳನ್ನು ಸಮರ್ಥವಾಗಿ ನಿಭಾಯಿಸಿ ಶ್ಲಾಘನೆಗೆ ಪಾತ್ರವಾಗಿದ್ದರು. ಅವರ ವರ್ಗಾವಣೆಗೆ ರಾಜಕೀಯ ಒತ್ತಡವೇ ಕಾರಣ ಎಂಬ ಮಾತೂ ಕೇಳಿಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT