ADVERTISEMENT

‘ಶೌಚಾಲಯ ಬಳಕೆ: ಜಾಗೃತಿ ಅಗತ್ಯ’

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2018, 9:54 IST
Last Updated 10 ಏಪ್ರಿಲ್ 2018, 9:54 IST

ಯಲಬುರ್ಗಾ: ಕಡ್ಡಾಯವಾಗಿ ಮನೆ ಗೊಂದು ಶೌಚಾಲಯ ನಿರ್ಮಿಸಿ ಕೊಳ್ಳುವುದರ ಜತೆಗೆ ಅದನ್ನು ಕಡ್ಡಾ ಯವಾಗಿ ಬಳಸಿಕೊಳ್ಳುವಂತೆ ಹೆಚ್ಚಿನ ಜಾಗೃತಿ ಮೂಡಿಸುವಲ್ಲಿ ಎನ್‌ಎಸ್‌ ಎಸ್‌ ಶಿಬಿರಾರ್ಥಿಗಳು ಶ್ರಮಿಸಬೇಕಾಗಿದೆ ಎಂದು ಸ್ಥಳೀಯ ಸರ್ಕಾರಿ ಆಸ್ಪತ್ರೆಯ ವೈದ್ಯ ಶೇಖರ ಹೇಳಿದರು.

ಪಟ್ಟಣದ ಬಸವಲಿಂಗೇಶ್ವರ ಕಾಲೊ ನಿಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಗ್ರಾಮ ಪ್ರದೇಶಗಳಲ್ಲಿ ವಿವಿಧ ಕಾಲೇಜು ಆಯೋಜಿಸಿದ್ದ ಶಿಬಿರಗಳ ಮೂಲಕ ಸಾರ್ವಜನಿಕರಲ್ಲಿ ಶೌಚಾಲಯದ ಬಗ್ಗೆ ಅರಿವು ಮೂಡಿಸಬೇಕಾಗಿದೆ. ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನ ಪಡೆದು ಶೌಚಾಲಯ ನಿರ್ಮಿಸಿಕೊಂಡರೂ ಅದನ್ನು ಸರಿಯಾಗಿ ಬಳಸಿಕೊಳ್ಳದೆ ಬಹಿರ್ದೆಸೆಗೆ ಬಯಲಿಗೆ ಹೋಗುತ್ತಿರುವುದು ಬೇಸರದ ಸಂಗತಿಯಾಗಿದೆ. ಇದ ರಿಂದ ಗ್ರಾಮೀಣರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ’ ಎಂದರು.

ಅಧ್ಯಕ್ಷತೆ ವಹಿಸಿದ್ದ ಸಹಾಯಕ ಪ್ರಾಧ್ಯಾಪಕ ಎ.ಬಿ. ಕೆಂಚರೆಡ್ಡಿ ಮಾತನಾಡಿ,‘ ಗ್ರಾಮೀಣ ಪ್ರದೇಶ ದಲ್ಲಿ ವಾಸಿಸುವ ಜನರ ಆರೋಗ್ಯ ಸುಧಾರಣೆಯಲ್ಲಿ ಪರಿಸರ ಸ್ವಚ್ಛವಾ ಗಿರುವುದು ಮುಖ್ಯವಾಗಿರುತ್ತದೆ. ಕೊಳೆ ನೀರು ಸಂಗ್ರಹವಾಗದಂತೆ ನೋಡಿಕೊಳ್ಳುವುದು ಮತ್ತು ಉತ್ತಮ ವಾತಾವರಣ ನಿರ್ಮಿಸಿಕೊ ಳ್ಳಬೇಕು’ಎಂದು ಸಲಹೆ ನೀಡಿದರು.

ADVERTISEMENT

ಶಿಬಿರಾಧಿಕಾರಿ ಎಚ್‌.ಎನ್‌, ಗುಡಿಹಿಂದಿನ ಮಾತನಾಡಿ, ‘ಶಿಬಿರಾರ್ಥಿಗಳು ಶ್ರಮದಾನ, ಯೋಗಾಭ್ಯಾಸ, ಪ್ರಾರ್ಥನೆ ಜೊತೆಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪಾಲ್ಗೊ ಳ್ಳುವ ಮೂಲಕ ಉತ್ತಮ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು’ ಎಂದರು.

ರಮೇಶ ಗುಜ್ಜಾರ, ಗವಿಸಿದ್ದಯ್ಯ ಮಠದ, ನಿರ್ಮಲಾ ಬಿ, ರುದ್ರಮುನಿ ಯಕಲಾಸಪುರ, ದೇವೇಂದ್ರಪ್ಪ ಬಡಿಗೇರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.