ADVERTISEMENT

ಬಾಲಕನಿಗೆ ಆಟೊ ಕೊಟ್ಟ ಮಾಲೀಕನಿಗೆ ₹1.41 ಕೋಟಿ ದಂಡ!

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2025, 0:49 IST
Last Updated 23 ಏಪ್ರಿಲ್ 2025, 0:49 IST
   

ಗಂಗಾವತಿ (ಕೊಪ್ಪಳ ಜಿಲ್ಲೆ): ಬಾಲಕನೊಬ್ಬ ಆಟೊ ಚಲಾಯಿಸುವಾಗ ಅಪಘಾತ ಮಾಡಿ ವ್ಯಕ್ತಿಯೊಬ್ಬರ ಸಾವಿಗೆ ಕಾರಣವಾಗಿದ್ದಕ್ಕೆ ಆಟೊ ಮಾಲೀಕನಿಗೆ ₹1.41 ಕೋಟಿ ದಂಡ ವಿಧಿಸಿ ಗಂಗಾವತಿ ಹಿರಿಯ ಸಿವಿಲ್​ ನ್ಯಾಯಾಲಯ ಮಂಗಳವಾರ ಆದೇಶಿಸಿದೆ.

2021ರ ಮಾರ್ಚ್​ 10ರಂದು ಯಲಬುರ್ಗಾದಲ್ಲಿ ಅಪಘಾತ ನಡೆದಿತ್ತು. ಯಲಬುರ್ಗಾದ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಗಂಗಾವತಿ ನಿವಾಸಿ ರಾಜಶೇಖರ ಪಾಟೀಲ್​ ಅವರು ಮೃತಪಟ್ಟಿದ್ದರು. ಆಟೊ ಚಲಾಯಿಸುತ್ತಿದ್ದ 17 ವರ್ಷದ ಬಾಲಕನ ನಿರ್ಲಕ್ಷ್ಯವೇ ಇದಕ್ಕೆ ಕಾರಣವೆಂದು ದೂರು ದಾಖಲಾಗಿತ್ತು.

ಪ್ರಕರಣದ ವಿಚಾರಣೆ ನಡೆಸಿದ ಹಿರಿಯ ಸಿವಿಲ್​ ನ್ಯಾಯಾಧೀಶರಾದ ರಮೇಶ ಎಸ್​.ಗಾಣಿಗೇರ ಅವರು ಬಾಲಕನಿಗೆ ಆಟೊ ಚಲಾಯಿಸಲು ಕೊಟ್ಟಿದ್ದ ಮಾಲೀಕನಿಗೆ ದೊಡ್ಡ ಮೊತ್ತದ ದಂಡ ವಿಧಿಸಿದ್ದಾರೆ. ದಂಡದ ಮೊತ್ತವನ್ನು ರಾಜಶೇಖರ ಕುಟುಂಬಕ್ಕೆ ಪರಿಹವಾರವಾಗಿ ನೀಡುವಂತೆಯೂ ಸೂಚಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.