ADVERTISEMENT

ಮಾರುತೇಶ್ವರ ಮಹಾರಥೋತ್ಸವ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2018, 8:55 IST
Last Updated 9 ಫೆಬ್ರುವರಿ 2018, 8:55 IST

ಯಲಬುರ್ಗಾ: ತಾಲ್ಲೂಕಿನ ಚಿಕ್ಕವಂಕಲಕುಂಟಾ ಗ್ರಾಮದ ಮಾರುತೇಶ್ವರ ದೇವರ ಜಾತ್ರೆಯ ಪ್ರಯುಕ್ತ ಬುಧವಾರ ಅದ್ಧೂರಿಯಾಗಿ ಮಹಾರಥೋತ್ಸವ ಜರುಗಿತು. ತಾಲ್ಲೂಕಿನ ವಿವಿಧ ಗ್ರಾಮಗಳು ಸೇರಿದಂತೆ ನೆರೆಯ ಜಿಲ್ಲೆಗಳ ಭಕ್ತರು ರಥೋತ್ಸವದಲ್ಲಿ ಭಾಗವಹಿಸಿದ್ದರು.ಇದಕ್ಕೂ ಮುನ್ನ ಗೊಲ್ಲ ಸಮಾಜದವರು ಆಡಿದ ಹಾಲೋಕುಳಿ ಗಮನ ಸೆಳೆಯಿತು. ಹಾಲೋಕುಳಿ ಮುಗಿಯುತ್ತಿದ್ದಂತೆ, ಹೂಮಾಲೆಗಳಿಂದ ಅಲಂಕೃತಗೊಂಡಿದ್ದ ರಥದ ಉತ್ಸವಕ್ಕೆ ಚಾಲನೆ ದೊರೆಯಿತು.

ಸಹಸ್ರಾರು ಭಕ್ತರು ರಥ ಎಳೆದರು. ಕಳೆದ ವರ್ಷಕ್ಕಿಂತ ಈ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಸೇರಿದ್ದರಿಂದ ಅವರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.

ಜಾತ್ರೆ ಪ್ರಯುಕ್ತ ಬೆಳಿಗ್ಗೆ ದೇವಸ್ಥಾನದಲ್ಲಿ ಪಂಚಾಮೃತ ಅಭಿಷೇಕ ಹಾಗೂ ಇನ್ನಿತರ ವಿವಿಧ ಧಾರ್ಮಿಕ ಚಟುವಟಿಕೆಗಳು ನಡೆದವು. ಹರಕೆ ಹೊತ್ತ ಭಕ್ತರು ದೀಡ್ ನಮಸ್ಕಾರ, ಜವಳ ಹಾಗೂ ಇನ್ನಿತರ ಕಾರ್ಯಕ್ರಮ ನಡೆಸಿದರು. ಭಕ್ತರು ಹರಕೆ ತೀರಿಸಿ ಭಕ್ತಿ ಸಮರ್ಪಿಸಿದರು

ADVERTISEMENT

ಜಾತ್ರೆಯ ಉಸ್ತುವಾರಿ ವಹಿಸಿದ್ದ ತಹಶೀಲ್ದಾರ್‌ ರಮೇಶ ಅಳವಂಡಿಕರ್, ನಾಡ ತಹಶೀಲ್ದಾರ್‌ ವಿಜಯಕುಮಾರ ಗುಂಡೂರ, ದೇವಸ್ಥಾನ ಸಮಿತಿಯ ವ್ಯವಸ್ಥಾಪಕ ಚಂದಪ್ಪ ಕುರಿ ಅವರಿ ರಥೋತ್ಸವದಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.