ADVERTISEMENT

ನಾಯಿ ಕಡಿದು 7 ಜನರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 15 ಜೂನ್ 2022, 9:18 IST
Last Updated 15 ಜೂನ್ 2022, 9:18 IST

ಕುಷ್ಟಗಿ (ಕೊಪ್ಪಳ ಜಿಲ್ಲೆ): ಹುಚ್ಚು ಹಿಡಿದಿದೆ ಎನ್ನಲಾದ ನಾಯಿ ಕಚ್ಚಿ ಮಕ್ಕಳು ಹಾಗೂ ವೃದ್ಧರು ಸೇರಿ ಸುಮಾರು ಏಳು ಜನ ತೀವ್ರವಾಗಿ ಗಾಯಗೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದಲ್ಲಿ ಬುಧವಾರ ನಡೆದಿದೆ.

ವಿದ್ಯಾನಗರ ಹಾಗೂ ಬಸ್ ನಿಲ್ದಾಣದಲ್ಲಿ ಕೆಲವು ಜನರನ್ನು ಕಚ್ಚಿ ಗಾಯಗೊಳಿಸಿದ್ದ ನಾಯಿ ನಂತರ ಇಲ್ಲಿಯ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಓಡಾಡಿದೆ. ಆಸ್ಪತ್ರೆಯಲ್ಲಿದ್ದ ರೋಗಿಯೊಬ್ಬರನ್ನು ಭೇಟಿ ಮಾಡಲು ಬಂದಿದ್ದ ಒಬ್ಬ ವ್ಯಕ್ತಿಯ ಮೇಲೂ ದಾಳಿ ನಡೆಸಿ ಗಾಯಗೊಳಿಸಿದೆ. ನಾಯಿಯಿಂದ ಕಚ್ಚಿಸಿಕೊಂಡವರಿಗೆ ಇಲ್ಲಿಯ ಸರ್ಕಾರಿ ಆಸ್ಪತ್ರೆಯ ವೈದ್ಯರು ರೇಬಿಸ್ ರೋಗ ನಿರೋಧಕ ಲಸಿಕೆ ಹಾಕಿ ಚಿಕಿತ್ಸೆ ನೀಡಿದ್ದಾರೆ.

ಆದರೆ, ನಾಯಿ ಸದ್ಯ ಎಲ್ಲಿದೆ ಎಂಬುದು ಗೊತ್ತಾಗಿಲ್ಲ.ನಾಯಿ ಕಡಿತಕ್ಕೆ ನೀಡುವ ರೇಬಿಸ್ ರೋಗ ನಿರೋಧಕ ಲಸಿಕೆ ಅಗತ್ಯ ಪ್ರಮಾಣದಲ್ಲಿ ಲಭ್ಯ ಇದ್ದು ಹೆಚ್ಚಿನ ಚಿಕಿತ್ಸೆ ಅಗತ್ಯವಾಗಿದಲ್ಲಿ ಜಿಲ್ಲಾ ಆಸ್ಪತ್ರೆಗೆ ಕಳಿಸಲಾಗುತ್ತದೆ ಎಂದು ಇಲ್ಲಿಯ ಸರ್ಕಾರಿ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.