ಅಳವಂಡಿ: ಸಮೀಪದ ಮೈನಹಳ್ಳಿ ಗ್ರಾಮದಲ್ಲಿ ಮಂಗಳವಾರ ಕೆರೆಯಲ್ಲಿ ಈಜಲು ಸ್ನೇಹಿತರೊಂದಿಗೆ ತೆರಳಿದ್ದ ಬಾಲಕನೊಬ್ಬ ಮೃತಪಟ್ಟಿದ್ದಾನೆ.
ಹಂದ್ರಾಳ ಗ್ರಾಮದ ಫಕೀರಗೌಡ (15) ಮೃತಪಟ್ಟ ಬಾಲಕ. ಈತ ಇಲ್ಲಿನ ಮೈನಹಳ್ಳಿಯ ಸರ್ಕಾರಿ ಪ್ರೌಢ ಶಾಲೆಯಲ್ಲಿ ಇತನು 9ನೇ ತರಗತಿ ಓದುತ್ತಿದ್ದನು.
ಮಂಗಳವಾರ ಸಂಜೆ ತನ್ನ ಸ್ನೇಹಿತರ ಜತೆಗೆ ಈಜಲು ಕೆರೆಗೆ ತೆರಳಿದ್ದ ಬಾಲಕ ಫಕೀರಗೌಡ ನೀರಿಗೆ ಸುರುಳಿಯಾಕಾರದಲ್ಲಿ ಹಾರಿದ್ದಾನೆ. ನೀರಿಗೆ ಹಾರಿದ ಫಕೀರಗೌಡ ಮೇಲೆ ಏಳಲಿಲ್ಲ. ಇದನ್ನು ನೋಡಿದ ಕೆರೆಯ ದಡದಲ್ಲಿದ್ದ ಸ್ನೇಹಿತರು ತಕ್ಷಣ ಶಾಲಾ ಶಿಕ್ಷಕರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಬಂದ ಶಿಕ್ಷಕರು ವಿದ್ಯಾರ್ಥಿಯನ್ನು ಕೆರೆಯ ನೀರಿನಲ್ಲಿ ಹುಡುಕಾಟ ನಡೆಸಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಈ ಕುರಿತು ಅಳವಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.