ADVERTISEMENT

ರೆಡ್ಡಿಗೆ ಕುರಿ ಕೊಡಲು ಹೊರಟಿದ್ದ ಅಭಿಮಾನಿ; ತಡೆದ ಅಧಿಕಾರಿಗಳು

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2023, 13:34 IST
Last Updated 19 ಮಾರ್ಚ್ 2023, 13:34 IST
ಗಂಗಾವತಿಯಲ್ಲಿ ಜನಾರ್ದನ ರೆಡ್ಡಿಗೆ ನೀಡಲು ಯಮನೂರಪ್ಪ ಪುಂಡಗೌಡ (ಹಳದಿ ಬಟ್ಟೆ ಧರಿಸಿರುವವರು) ತಂದಿದ್ದ ಕುರಿಗಳು
ಗಂಗಾವತಿಯಲ್ಲಿ ಜನಾರ್ದನ ರೆಡ್ಡಿಗೆ ನೀಡಲು ಯಮನೂರಪ್ಪ ಪುಂಡಗೌಡ (ಹಳದಿ ಬಟ್ಟೆ ಧರಿಸಿರುವವರು) ತಂದಿದ್ದ ಕುರಿಗಳು   

ಗಂಗಾವತಿ (ಕೊಪ್ಪಳ ಜಿಲ್ಲೆ): ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸ್ಥಾಪಕ ಜನಾರ್ದನ ರೆಡ್ಡಿ ಅವರಿಗೆ 100 ಕುರಿಗಳನ್ನು ಉಡುಗೊರೆ ನೀಡಲು ಹೊರಟಿದ್ದ ಅಭಿಮಾನಿಯೊಬ್ಬರನ್ನು ಅಧಿಕಾರಿಗಳು ಭಾನುವಾರ ತಡೆದರು.

ಇಲ್ಲಿನ ಕನಕಗಿರಿ ರಸ್ತೆಯಲ್ಲಿರುವ ರೆಡ್ಡಿ ಮನೆಗೆ ಅವರ ಅಭಿಮಾನಿ ಯಮನೂರಪ್ಪ ಪುಂಡಗೌಡ ಎನ್ನುವವರು ವಾಹನದಲ್ಲಿ ಕುರಿಗಳನ್ನು ತುಂಬಿಕೊಂಡು ಬಂದಿದ್ದರು. ವಿರೂಪಾಪುರ ತಾಂಡಾದಲ್ಲಿ ಆಯೋಜನೆಯಾಗಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರೆಡ್ಡಿ ತೆರಳಿದ್ದರು. ಆ ಕಾರ್ಯಕ್ರಮದಲ್ಲಿ ರೆಡ್ಡಿಯನ್ನು ಭೇಟಿಯಾಗಲು ಯಮನೂರಪ್ಪ ತೆರಳುವಾಗ ತಾಲ್ಲೂಕು ಚುನಾವಣಾಧಿಕಾರಿಗಳು ಹಾಗೂ ಪೊಲೀಸರು ತಡೆದು ವಾಪಸ್‌ ಕಳುಹಿಸಿದರು.

ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಗಂಗಾವತಿ ತಹಶೀಲ್ದಾರ್‌ ಮಂಜುನಾಥ ‘ಚುನಾವಣಾ ಆಯೋಗದ ನಿಯಮದ ಪ್ರಕಾರ ಅಭ್ಯರ್ಥಿ ಎಂದು ಘೋಷಿಸಿಕೊಂಡವರಿಗೆ ಉಡುಗೊರೆ ನೀಡಲು ಅವಕಾಶವಿಲ್ಲ. ಆದ್ದರಿಂದ ತಡೆದಿದ್ದೇವೆ’ ಎಂದರು. ಜನಾದರ್ನರೆಡ್ಡಿ ಹೊಸ ಪಕ್ಷ ಸ್ಥಾಪಿಸಿ ಗಂಗಾವತಿ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದಾಗ ಯಮನೂರಪ್ಪ ಕುರಿ ಕೊಡುವುದಾಗಿ ವಾಗ್ದಾನ ಘೋಷಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.