ADVERTISEMENT

ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಯುವಕ ಸಾವು

ಮೃತ ಯುವಕನನ್ನು ರಾಜಾಸಾಬ್ (25)  ಎಂದು ಗುರುತಿಸಲಾಗಿದೆ.

​ಪ್ರಜಾವಾಣಿ ವಾರ್ತೆ
Published 7 ಜೂನ್ 2021, 12:51 IST
Last Updated 7 ಜೂನ್ 2021, 12:51 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕೊಪ್ಪಳ: ಗಂಗಾವತಿ ತಾಲ್ಲೂಕಿನ ಚಿಕ್ಕಜಂತಕಲ್ ಗ್ರಾಮದ ಸಮೀಪದ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಯುವಕನೊಬ್ಬ‌ ಮರಳು ಗುಂಡಿಯಲ್ಲಿ ಸಿಲುಕಿ ಮೃತಪಟ್ಟಘಟನೆ ಭಾನುವಾರ ನಡೆದಿದ್ದು, ಸೋಮವಾರ ದೇಹ ಪತ್ತೆಯಾಗಿದೆ.

ಗ್ರಾಮದ ನದಿಯ ಸೇತುವೆಯ ಕೆಳಗಿನಿಂದ ಈಜಲು ತೆರಳಿದ್ದಾಗ ಈ ದುರ್ಘಟನೆ ನಡೆದಿದೆ. ಮೃತ ಯುವಕನನ್ನು ಗಂಗಾವತಿಯ 7ನೇ ವಾರ್ಡಿನ ಮೆಹಿಬೂಬ್ ನಗರದ ನಿವಾಸಿ ರಾಜಾಸಾಬ್ (25) ಎಂದು ಗುರುತಿಸಲಾಗಿದೆ.

ಇಬ್ಬರು ಸ್ನೇಹಿತರ ಜೊತೆ ಸ್ನಾನಕ್ಕೆ ಹೋಗಿದ್ದ. ಇನ್ನೊಬ್ಬ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದು, ಪ್ರಯಾಸದಿಂದ ಈಜಿ ದಡ ಸೇರಿದ್ದಾರೆ. ಮಗನನ್ನು ಕಳೆದುಕೊಂಡ ತಾಯಿ ಮತ್ತು ಅವರ ಸಹೋದರಿಯರ ಆಂಕ್ರದನ ಮುಗಿಲು ಮುಟ್ಟಿತ್ತು.

ADVERTISEMENT

ಗ್ರಾಮಸ್ಥರ ಆಕ್ರೋಶ: ಇಲ್ಲಿ ಅಕ್ರಮವಾಗಿ ಮರಳು ದಂಧೆ ನಡೆಯುತ್ತಿದ್ದು, ಬೇಕಾಬಿಟ್ಟಿಯಾಗಿ ಗುಂಡಿಗಳನ್ನು ತೋಡಿ ಬಿಡುವುದರಿಂದ ಪ್ರತಿವರ್ಷ ಹತ್ತಾರು ಜನರು ಬಲಿಯಾಗುತ್ತಿದ್ದಾರೆ. ಈ ಕುರಿತು ಸಂಬಂಧಿಸಿದವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.