ADVERTISEMENT

ಗಂಗಾವತಿ: ಎಸಿಬಿ ಬಲೆಗೆ ಸಂಗಾಪುರ ಪಿಡಿಒ

​ಪ್ರಜಾವಾಣಿ ವಾರ್ತೆ
Published 14 ಜನವರಿ 2022, 6:22 IST
Last Updated 14 ಜನವರಿ 2022, 6:22 IST
ಗಂಗಾವತಿ ತಾಲ್ಲೂಕಿನ ಸಂಗಾಪುರ ಗ್ರಾಮ ಪಂಚಾಯಿತಿಗೆ ಗುರುವಾರ ಎಸಿಬಿ ಅಧಿಕಾರಿಗಳು ಏಕಾಏಕಿ ಭೇಟಿ ನೀಡಿ, ಭ್ರಷ್ಟಾಚಾರ ಮಾಡುತ್ತಿದ್ದ ಗ್ರಾ.ಪಂ ಪಿಡಿಓ, ಕಾರ್ಯದರ್ಶಿ ಮೇಲೆ ದಾಳಿ ನಡೆಸಿದರು
ಗಂಗಾವತಿ ತಾಲ್ಲೂಕಿನ ಸಂಗಾಪುರ ಗ್ರಾಮ ಪಂಚಾಯಿತಿಗೆ ಗುರುವಾರ ಎಸಿಬಿ ಅಧಿಕಾರಿಗಳು ಏಕಾಏಕಿ ಭೇಟಿ ನೀಡಿ, ಭ್ರಷ್ಟಾಚಾರ ಮಾಡುತ್ತಿದ್ದ ಗ್ರಾ.ಪಂ ಪಿಡಿಓ, ಕಾರ್ಯದರ್ಶಿ ಮೇಲೆ ದಾಳಿ ನಡೆಸಿದರು   

ಗಂಗಾವತಿ: ತಾಲ್ಲೂಕಿನ ಸಂಗಾಪುರ ಗ್ರಾಮ ಪಂಚಾಯಿತಿಗೆ ಗುರುವಾರ ಎಸಿಬಿ ಅಧಿಕಾರಿಗಳು ಏಕಾಏಕಿ ಭೇಟಿ ನೀಡಿ, ಭ್ರಷ್ಟಾಚಾರ ಮಾಡುತ್ತಿದ್ದ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ ಮೇಲೆ ದಾಳಿ ನಡೆಸಿದ್ದಾರೆ.

ಸಂಗಾಪುರ ಗ್ರಾ.ಪಂ ವ್ಯಾಪ್ತಿಯಲ್ಲಿನ ಬಂಡಿ ಬಸಪ್ಪ ಕ್ಯಾಂಪ್ ಗ್ರಾಮದ ನಿವಾಸಿ ವಿಜಯ ಕುಮಾರ್ ಅವರ‌ ಮನೆಗೆ 11 ಬಿ ಫಾರಂ ನೀಡಲು ಗ್ರಾ.ಪಂ ಪಿಡಿಓ ₹6 ಸಾವಿರ ಲಂಚ ಬೇಡಿಕೆ ಇಟ್ಟಿದ್ದರು. ಅದರಂತೆ ಗುರವಾರ ಬಂಡಿ ಬಸಪ್ಪ ಕ್ಯಾಂಪಿನ ನಿವಾಸಿಯನ್ನು ಕರೆಯಿಸಿಕೊಂಡು ಗ್ರಾ.ಪಂ ಕಚೇರಿಯಲ್ಲಿ ಪಿಡಿಒ ಲಂಚ ಸ್ವೀಕರಿಸುವಾಗ ಕೊಪ್ಪಳ ಎಸಿಬಿ ಎಸ್ಪಿ ಹರಿಬಾಬು ಹಾಗೂ ಶಿವಕುಮಾರ್ ನೇತೃತ್ವದಲ್ಲಿನ ತಂಡ ದಾಳಿ ನಡೆಸಿದೆ.

ನಂತರ ದಾಳಿಯಲ್ಲಿ ಸಿಕ್ಕಿಬಿದ್ದ ಪಿಡಿಒ ಶೇಖಸಾಬ್ ಹಾಗೂ ಕಾರ್ಯದರ್ಶಿ ನೂರ್ ಉಲ್ಲಕ್ ಅವರನ್ನು ಎಸಿಬಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.