ADVERTISEMENT

ಅಪಘಾತ: ಗಾಯಾಳು ಸಾವು

​ಪ್ರಜಾವಾಣಿ ವಾರ್ತೆ
Published 15 ಜನವರಿ 2020, 11:25 IST
Last Updated 15 ಜನವರಿ 2020, 11:25 IST

ಕಾರಟಗಿ: ದ್ವಿಚಕ್ರ ವಾಹನದ ಮೇಲೆ ಲಾರಿ ಹರಿದು ತೀವ್ರ ಗಾಯಗೊಂಡಿದ್ದ ಬೈಕ್‌ನ ಹಿಂಬದಿ ಸವಾರ ಭಾನುವಾರ ರಾತ್ರಿ ಮೃತಪಟ್ಟಿದ್ದಾರೆ.

ರಾಜೀವಗಾಂಧಿ ನಗರದ ರಮೇಶ ಹನುಮಂತಪ್ಪ ನಾಯಕ (25) ಮೃತಪಟ್ಟವರು.ಜ. 7ರಂದು ಗಂಗಾವತಿಯ ಚನ್ನಬಸವತಾತನ ಜಾತ್ರೆಗೆ ದ್ವಿಚಕ್ರ ವಾಹನದಲ್ಲಿ ತೆರಳುವಾಗ ಸಿದ್ದಾಪುರ ಬಳಿ ಲಾರಿ ಹರಿದು, ಬೈಕ್ ಸವಾರ ಮಲ್ಲಿಕಾರ್ಜುನ (25) ಸ್ಥಳದಲ್ಲೇ ಮೃತಪಟ್ಟಿದ್ದರು.

ರಮೇಶನ ತಲೆಗೆ ಗಂಭೀರ ಪೆಟ್ಟು ಬಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಯುವಕ ಮೃತಪಟ್ಟರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.