ADVERTISEMENT

ಪರಿಶಿಷ್ಟ ಜಾತಿ ಜನರ ಮೇಲೆ ದೌರ್ಜನ್ಯ ಆರೋಪ; ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 10 ಜೂನ್ 2021, 6:02 IST
Last Updated 10 ಜೂನ್ 2021, 6:02 IST

ಯಲಬುರ್ಗಾ: ತಾಲ್ಲೂಕಿನ ಹೊಸಳ್ಳಿ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಜನರ ಮೇಲೆ ದೌರ್ಜನ್ಯ ನಡೆಸಿದ ಆರೋಪದಲ್ಲಿ 14 ಜನ ಪಂಚಮಸಾಲಿ ಹಾಗೂ ಇಬ್ಬರು ಕ್ಷೌರಿಕರು ಸೇರಿ ಒಟ್ಟು 16 ಜನರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಸೋಮವಾರ ಕ್ಷೌರ ಮಾಡುವುದಕ್ಕೆ ಸಂಬಂಧಿಸಿದಂತೆ ನಡೆದ ಜಗಳವು ತೀವ್ರ ಸ್ಪರೂಪ ಪಡೆದು ಪರಸ್ಪರ ಹಲ್ಲೆ ಮಾಡುವ ಮಟ್ಟಕ್ಕೆ ನಡೆದಿದೆ. ಈ ಬಗ್ಗೆ ಯಲಬುರ್ಗಾ ಠಾಣೆಯಲ್ಲಿ ದೇವಪ್ಪ ಭೀಮವ್ವ ಹರಿಜನ ಎಂಬುವರು ದಲಿತರ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದಾರೆ ಎಂದು ಪಿಎಸ್‍ಐ ಶಿವಕುಮಾರ ಅವರು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT