ADVERTISEMENT

ಆನೆಗೊಂದಿ, ಕನಕಗಿರಿ ಉತ್ಸವ ಆಚರಣೆಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2022, 12:07 IST
Last Updated 10 ನವೆಂಬರ್ 2022, 12:07 IST
ಆನೆಗೊಂದಿ ಹಾಗೂ ಕನಕಗಿರಿ ಉತ್ಸವ ನಡೆಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆ ಸದಸ್ಯರು ಬುಧವಾರ ತಹಶೀಲ್ದಾರ್‌ ಯು.ನಾಗರಾಜ ಅವರಿಗೆ ಮನವಿ ಸಲ್ಲಿಸಿದರು
ಆನೆಗೊಂದಿ ಹಾಗೂ ಕನಕಗಿರಿ ಉತ್ಸವ ನಡೆಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆ ಸದಸ್ಯರು ಬುಧವಾರ ತಹಶೀಲ್ದಾರ್‌ ಯು.ನಾಗರಾಜ ಅವರಿಗೆ ಮನವಿ ಸಲ್ಲಿಸಿದರು   

ಗಂಗಾವತಿ: ವಿಜಯನಗರ ಸಾಮ್ರಾಜ್ಯದ ಇತಿಹಾಸ ಸಾರುವ ಆನೆಗೊಂದಿ ಹಾಗೂ ಕನಕಗಿರಿ ಉತ್ಸವ ನಡೆಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆ ಸದಸ್ಯರು ಬುಧವಾರ ಪ್ರತಿಭಟನೆ ನಡೆಸಿ, ತಹಶೀಲ್ದಾರ್‌ ಯು.ನಾಗರಾಜ ಅವರಿಗೆ ಮನವಿ ಸಲ್ಲಿಸಿದರು.

ಕರವೇ ಸಂಘಟನೆ ಜಿಲ್ಲಾಧ್ಯಕ್ಷ ಪಂಪಣ್ಣ ಮಾತನಾಡಿ, ಆನೆಗೊಂದಿ ಸುತ್ತಮುತ್ತ ವಿಜಯನಗರ ಕಾಲದ ದೇವಸ್ಥಾನ, ಮಂಟಪ ಸೇರಿ ಇತಿಹಾಸ ತಿಳಿಸುವ ಅನೇಕ ಕುರುಹುಗಳಿದ್ದು, ಇಲ್ಲಿನ ಇತಿಹಾಸ, ಸಂಸ್ಕೃತಿ ಉಳಿಸುವ ಉದ್ದೇಶದಿಂದ ಆನೆಗೊಂದಿ ಹಾಗೂ ಕನಕಗಿರಿ ಉತ್ಸವ ನಡೆಸಲಾಗುತ್ತಿದೆ.

ಕಳೆದ 2 ವರ್ಷಗಳಿಂದ ಕೋವಿಡ್ ಭೀತಿ ಹಿನ್ನಲೆಯಲ್ಲಿ ಸರ್ಕಾರ ಉತ್ಸವ ಕೈಬಿಟ್ಟಿದ್ದು, ಕೊನೆಯ ಬಾರಿ ಆನೆಗೊಂದಿ ಉತ್ಸವ 2019-20ನೇ ಸಾಲಿನಲ್ಲಿ ನಡೆದಿತ್ತು. ಇದೀಗ ಸರ್ಕಾರ ಎಲ್ಲ ಬೃಹತ್ ಕಾರ್ಯಕ್ರಮಗಳು ನಡೆಸುತ್ತಿದ್ದು, ಉತ್ಸವಕ್ಕೆ ಮಾತ್ರ ಆಸಕ್ತಿ ತೋರುತ್ತಿಲ್ಲ ಎಂದರು.

ADVERTISEMENT

ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ತಮ್ಮ ವಿಜಯನಗರ ಜಿಲ್ಲೆಯ ಹಂಪಿ ಉತ್ಸವ ಸಂಭ್ರಮದಿಂದ ನಡೆಸಲು ಸಿದ್ಧತೆ ನಡೆಸಿ, ಆನೆಗೊಂದಿ, ಕನಕಗಿರಿ ಉತ್ಸವದ ವಿಚಾರದಲ್ಲಿ ತಾರತಮ್ಯ ನೀತಿ ತೋರುತ್ತಿದ್ದಾರೆ ಎಂದು ದೂರಿದರು.

ಗಂಗಾವತಿ ಶಾಸಕರು ಆನೆಗೊಂದಿ ಉತ್ಸವಕ್ಕೆ ₹ 10 ಕೋಟಿ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ ಎಂಬ ಹೇಳಿಕೆ ನೀಡುತ್ತಿದ್ದಾರೆ ಹೊರೆತು, ಆಚರಿಸಲೆಬೇಕು ಎಂಬ ದೃಢ ನಿರ್ಧಾರ ತೋರುತ್ತಿಲ್ಲ. ಕೂಡಲೇ ಜಿಲ್ಲಾಡಳಿತ, ಶಾಸಕರು ಆನೆಗೊಂದಿ ಉತ್ಸವ ನಡೆಸಲು ಮುಂದಾಗಬೇಕು ಎಂದು ಆಗ್ರಹಿಸಿದರು.

ಹುಸೇನಸಾಬ್, ಶಂಕರ ಪೂಜಾರಿ, ಪುಂಡಲೀಕ ಬಿಸಿಲದಿನ್ನಿ, ಶರಣು ನಾಯಕ, ಉಮೇಶ ಬಂಡಿ, ಅಂಜಿನಪ್ಪ ಪೂಜಾರಿ, ಹಸೇನಸಾಬ್, ವೆಂಕಟೇಶ, ಪರಶುರಾಮ, ಭರಮಪ್ಪ, ಈರಣ್ಣ, ಹುಲುಗಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.