ADVERTISEMENT

ಅಂಜನಾದ್ರಿ: ಫಲಕ ಕಿತ್ತು ಹಾಕಿದ ತಾಲ್ಲೂಕು ಆಡಳಿತ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2022, 13:41 IST
Last Updated 29 ನವೆಂಬರ್ 2022, 13:41 IST

ಗಂಗಾವತಿ (ಕೊಪ್ಪಳ ಜಿಲ್ಲೆ): ‘ಅಂಜನಾದ್ರಿ ಬೆಟ್ಟ ಪ್ರದೇಶದಲ್ಲಿ ಹಿಂದೂಗಳನ್ನು ಹೊರತುಪಡಿಸಿ ಅನ್ಯ ಧರ್ಮೀಯರಿಗೆ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಬಾರದು’ ಎಂದು ಹಿಂದೂ ಜಾಗರಣ ವೇದಿಕೆ ಬೆಟ್ಟದ ಸಮೀಪ ಹಾಕಿದ್ದ ಫಲಕಗಳನ್ನು ಗಂಗಾವತಿ ತಾಲ್ಲೂಕು ಆಡಳಿತ ಮಂಗಳವಾರ ತೆರವುಗೊಳಿಸಿದೆ.

‘ಅಂಜನಾದ್ರಿ ಸುತ್ತಲೂ ವ್ಯಾಪಾರ ಮಾಡುವ ಜಾಗ ಖಾಸಗಿಯವರಿಗೆ ಸೇರಿದ್ದು ಅನುಮತಿ ನೀಡುವುದು, ಬಿಡುವುದು ಅಲ್ಲಿನ ಮಾಲೀಕರಿಗೆ ಬಿಟ್ಟ ವಿಚಾರ’ ಎಂದು ಗಂಗಾವತಿ ತಹಶೀಲ್ದಾರ್‌ ಯು. ನಾಗರಾಜ್ ತಿಳಿಸಿದರು.

ಜಾಗರಣಾ ವೇದಿಕೆ ನಡೆ ಖಂಡಿಸಿ ಮಂಗಳವಾರ ಸಿಪಿಐಎಂ ತಾಲ್ಲೂಕು ಸಮಿತಿ ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿತು.

ADVERTISEMENT

‘ಹಿಂದೂ ಜಾಗರಣ ವೇದಿಕೆ ಅಂಜನಾದ್ರಿ ಬೆಟ್ಟದಲ್ಲಿ ಬೇರೆ ಧರ್ಮದ ವ್ಯಾಪಾರಸ್ಥರಿಗೆ ಅವಕಾಶ ನೀಡಬಾರದು ಎಂದು ಆಗ್ರಹ ಮಾಡಿದ್ದು ಪ್ರಜಾಪ್ರಭುತ್ವ ನೀತಿಗೆ ವಿರೋಧವಾಗಿದೆ. ಇದು ಕೋಮುಗಲಭೆ ಸೃಷ್ಟಿಸುವ ತಂತ್ರ’ ಎಂದು ಸಿಪಿಐಎಂ ಜಿಲ್ಲಾ ಘಟಕದ ಅಧ್ಯಕ್ಷ ನಿರುಪಾದಿ ಬೆಣಕಲ್‌ ಆರೋಪಿಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.