ಗಂಗಾವತಿ: ತಾಲ್ಲೂಕಿನ ಚಿಕ್ಕರಾಂಪುರ ಸಮೀಪದ ಅಂಜನಾದ್ರಿ ಬೆಟ್ಟದ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಹುಂಡಿ ಹಣ ಎಣಿಕೆ ಮಾಡಲಾಯಿತು.
ಎಣಿಕೆ ಕಾರ್ಯ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಚ್.ಪ್ರಕಾಶರಾವ್ ನೇತೃತ್ವದಲ್ಲಿ ನಡೆದಿದ್ದು ₹38,92,840 (ಜೂ.26ರಿಂದ ಸೆ.24ವರೆಗೆ) ಸಂಗ್ರಹವಾಗಿದೆ.
ಕಳೆದ ಬಾರಿ (ಜೂ.25)ರಂದು ಹುಂಡಿ ಎಣಿಕೆ ವೇಳೆ ₹63.10ಲಕ್ಷ ಸಂಗ್ರಹವಾಗಿತ್ತು.
ಪಿಕೆಜಿಬಿ ಬ್ಯಾಂಕ್ ವ್ಯವಸ್ಥಾಪಕ ನವೀನ್, ಪೊಲೀಸ್ ಸಿಬ್ಬಂದಿ ಕಾಳಿಂಗ ಸೇರಿ ತಾಲ್ಲೂಕು ಆಡಳಿತ ಸಿಬ್ಬಂದಿ, ಪ್ರವಾಸಿ ಮಿತ್ರರು ಸೇರಿ ದೇವಸ್ಥಾನ ಸಿಬ್ಬಂದಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.