ADVERTISEMENT

ಹನುಮಸಾಗರ: ಕೃಷ್ಣಾ ಬಿ ಸ್ಕೀಮ್ ಯೋಜನೆ ಅನುಷ್ಠಾನಕ್ಕೆ ಮನವಿ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2021, 13:58 IST
Last Updated 4 ಆಗಸ್ಟ್ 2021, 13:58 IST
ಕುಷ್ಟಗಿ ತಾಲ್ಲೂಕು ಬಿಜೆಪಿ ಘಟಕದ ಮುಖಂಡರು ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಕೃಷ್ಣಾ ಬಿ ಸ್ಕೀಮ್ ಯೋಜನೆ ಅನುಷ್ಠಾನಕ್ಕೆ ಮನವಿ ಸಲ್ಲಿಸಿದರು
ಕುಷ್ಟಗಿ ತಾಲ್ಲೂಕು ಬಿಜೆಪಿ ಘಟಕದ ಮುಖಂಡರು ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಕೃಷ್ಣಾ ಬಿ ಸ್ಕೀಮ್ ಯೋಜನೆ ಅನುಷ್ಠಾನಕ್ಕೆ ಮನವಿ ಸಲ್ಲಿಸಿದರು   

ಹನುಮಸಾಗರ: ತಾಲ್ಲೂಕು ಬಿಜೆಪಿ ಘಟಕದ ಮುಖಂಡರು ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ಕೃಷ್ಣಾ ಬಿ ಸ್ಕೀಮ್ ಯೋಜನೆಯನ್ನು ತ್ವರಿತವಾಗಿ ಅನುಷ್ಠಾನ ಮಾಡಬೇಕು ಎಂದು ಮನವಿ ಸಲ್ಲಿಸಿದರು.

ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಬಸವರಾಜ ಹಳ್ಳೂರ ಈ ಕುರಿತು ಮಾಹಿತಿ ನೀಡಿ, ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಕೃಷ್ಣಾ ಬಿ ಸ್ಕೀಮ್ ಯೋಜನೆ ಪೂರ್ಣಗೊಳಿಸುವುದಕ್ಕೆ ಮನವಿ ಸಲ್ಲಿಸಿದ್ದೇವೆ. ಮುಖ್ಯಮಂತ್ರಿ ಅವರು ಯೋಜನೆಗೆ ಹಣಕಾಸಿನ ನೆರವು ನೀಡುವುದಾಗಿ ಹಾಗೂ ತ್ವರಿತವಾಗಿ ಕಾಮಗಾರಿ ಆರಂಭಿಸುವ ಕುರಿತು ಭರವಸೆ ನೀಡಿದ್ದಾರೆ‘ ಎಂದು ಹೇಳಿದರು.

ಸಚಿವ ಹಾಲಪ್ಪ ಆಚಾರ್, ಮಾಜಿ ಶಾಸಕರಾದ ದೊಡ್ಡನಗೌಡ ಪಾಟೀಲ, ಕೆ.ಶರಣಪ್ಪ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.