ADVERTISEMENT

ಗಸ್ತಿ ನಿಧನಕ್ಕೆ ಬಿಜೆಪಿ ಶ್ರದ್ಧಾಂಜಲಿ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2020, 13:36 IST
Last Updated 18 ಸೆಪ್ಟೆಂಬರ್ 2020, 13:36 IST
ಕೊಪ್ಪಳ ಜಿಲ್ಲಾ ಕಾರ್ಯಾಲಯದಲ್ಲಿ ಶುಕ್ರವಾರ ರಾಜ್ಯಸಭಾ ಸದಸ್ಯರಾದ ಅಶೋಕ ಗಸ್ತಿ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಶ್ರದ್ಧಾಂಜಲಿ ಸಲ್ಲಿಸಿದರು
ಕೊಪ್ಪಳ ಜಿಲ್ಲಾ ಕಾರ್ಯಾಲಯದಲ್ಲಿ ಶುಕ್ರವಾರ ರಾಜ್ಯಸಭಾ ಸದಸ್ಯರಾದ ಅಶೋಕ ಗಸ್ತಿ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಶ್ರದ್ಧಾಂಜಲಿ ಸಲ್ಲಿಸಿದರು   

ಕೊಪ್ಪಳ: ನಗರದ ಜಿಲ್ಲಾ ಕಾರ್ಯಾಲಯದಲ್ಲಿ ರಾಜ್ಯಸಭಾ ಸದಸ್ಯರಾದ ಅಶೋಕ ಗಸ್ತಿ ಅವರ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಬಳಿಕ ಪ್ರಕಾಶ್ ವಕೀಲರು ಮಾತನಾಡಿ, ಅಶೋಕ್ ಗಸ್ತಿ ಜೀ ಅವರು ಅತ್ಯಂತ ಸಾಮಾನ್ಯ ಕಾರ್ಯಕರ್ತರು ಅವರು ಸಂಘದ ಜೊತೆ ಅತ್ಯುತಮ ಬಾಂಧವ್ಯ ಹೊಂದಿದ್ದು ಸರಳ ಜೀವಿ ಆಗಿದ್ದರು, ಅವರ ಅಗಲಿಕೆ ತೀವ್ರ ನೋವಾಗಿದೆ ಎಂದರು.

ಗ್ರಾಮೀಣ ಅಧ್ಯಕ್ಷ ಪ್ರದೀಪ್ ಹಿಟ್ನಾಳ್ ಮಾತನಾಡಿ, ಅಶೋಕ್ ಜೀ ಅವರು ಸಾಮಾನ್ಯ ಕಾರ್ಯಕರ್ತರು ನಮ್ಮ ಪಕ್ಷ ದುಡಿದವರಿಗೆ ಸ್ಥಾನಮಾನ ಕೊಡುತ್ತೆ ಅನ್ನೋದಕ್ಕೆ ಅಶೋಕ್ ಗಸ್ತಿ ಜೀ ಉದಾಹರಣೆ, ಅವರ ಅಗಲಿಕೆ ನಮ್ಮೆಲರಿಗೂ ತುಂಬಲಾರದ ನಷ್ಟ ಉಂಟಾಗಿದೆ ಎಂದರು.

ADVERTISEMENT

ನಗರ ಘಟಕದ ಅಧ್ಯಕ್ಷ, ಪದಾಧಿಕಾರಿಗಳು ಹಾಗೂ ಗ್ರಾಮೀಣ ಘಟಕ ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.