ADVERTISEMENT

ಬಾಲ್ಯ ವಿವಾಹ ನಿಷೇಧ ಕಾಯ್ದೆ ಜಾಗೃತಿ ಮೂಡಿಸುವ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2021, 11:10 IST
Last Updated 20 ಡಿಸೆಂಬರ್ 2021, 11:10 IST
ಅಳವಂಡಿ ಗ್ರಾಮದ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ವಿವಿಧ ಸಂಘಟನೆ ಆಶ್ರಯದಲ್ಲಿ ಬಾಲ್ಯ ವಿವಾಹ ಹಾಗೂ ಪೋಸ್ಕೊ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಯಿತು.
ಅಳವಂಡಿ ಗ್ರಾಮದ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ವಿವಿಧ ಸಂಘಟನೆ ಆಶ್ರಯದಲ್ಲಿ ಬಾಲ್ಯ ವಿವಾಹ ಹಾಗೂ ಪೋಸ್ಕೊ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಯಿತು.   

ಅಳವಂಡಿ: ಗ್ರಾಮದ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಮಂಗಳೂರಿನ ಡೆವಲೆಪ್‌ಮೆಂಟ್ ಎಜುಕೇಶನ್ ಸೊಸೈಟಿ, ಕರ್ನಾಟಕ ಆರೋಗ್ಯ ಸೇವಾ ಪ್ರತಿಷ್ಠಾನ , ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಮತ್ತು ಸಾಂಸ್ಕೃತಿಕ ಸಂಘದ ಸಹಯೋಗದಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ ಜಾಗೃತಿ ಮೂಡಿಸುವ ಕಾರ್ಯಕ್ರಮನಡೆಯಿತು.

ಸಂಪನ್ಮೂಲ ವ್ಯಕ್ತಿ ವಿರೇಶ ಹಾಲಗುಂದಿ ಮಾತನಾಡಿ, ಬಾಲ್ಯವಿವಾಹ ನಿಷೇಧ ಕಾಯ್ದೆ, ಲಿಂಗ ಸಮಾನತೆ , ಕೌಟುಂಬಿಕ ದೌರ್ಜನ್ಯ ತಡೆ ಕಾನೂನು, ಬಾಲ್ಯವಿವಾಹಕ್ಕೆ ಕಾರಣಗಳು ಮತ್ತು ದುಷ್ಪರಿಣಾಮಗಳು ಬಗ್ಗೆ ಮಕ್ಕಳ ಅಪರಾಧಗಳ ರಕ್ಷಣಾ ಕಾಯ್ದೆ 2012 ಪೋಕ್ಸೋ ಕಾಯ್ದೆ ಬಗ್ಗೆ ಮಾಹಿತಿ ನೀಡಿದರು.

ಸಂಪನ್ಮೂಲ ವ್ಯಕ್ತಿ ವಿರೇಶ ಹಾಲಗುಂದಿ, ಸಿದ್ದಲಿಂಗಮ್ಮ ಹಾಲಗುಂದಿ, ರೇಖಾ ಕಣವಿ ಹಾಗೂ ಮಕ್ಕಳು, ಮಹಿಳೆಯರು ಹಾಜರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.