ADVERTISEMENT

ಕರಡಿ ದಾಳಿ: ರೈತನಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2020, 3:21 IST
Last Updated 5 ಅಕ್ಟೋಬರ್ 2020, 3:21 IST

ಕನಕಗಿರಿ: ಅಡವಿಬಾವಿ ಗ್ರಾಮದಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ರೈತರೊಬ್ಬರ ಮೇಲೆ ಕರಡಿ ಭಾನುವಾರ ದಾಳಿ ಮಾಡಿದೆ. ರೈತ ಗಾಯಗೊಂಡಿದ್ದಾರೆ.

ಹಿರೇ ಕುಂಟೆಪ್ಪ ವಂಕಲಕುಂಟಿ ಗಾಯಗೊಂಡವರು.

ಕರಡಿ ಏಕಾಏಕಿ ಮೇಲೆ ಎರಗಿದ ಪರಿಣಾಮ ರೈತರ ಕಿವಿ,‌ಕುತ್ತಿಗೆ ಹಾಗೂ ಕೈಗಳಿಗೆ ಗಾಯಗಳಾಗಿವೆ. ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ‌ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಕೊಪ್ಪಳಕ್ಕೆ ಕಳಿಸಲಾಗಿದೆ ಎಂದು ತಿಳಿದುಬಂದಿದೆ.‌

ADVERTISEMENT

ಅಡವಿಬಾವಿ ಗ್ರಾಮದ ಪರಿಸರದಲ್ಲಿ ಕರಡಿಗಳ ಹಾವಳಿ ಹೆಚ್ಚಾಗಿರುವ ಕುರಿತು ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದರೂ ಬೋ‌ನ್ ವ್ಯವಸ್ಥೆ ಮಾಡಿಲ್ಲ ಎಂದು ಗ್ರಾಮಸ್ಥರು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.