ADVERTISEMENT

ಕರಡಿ ದಾಳಿ; ಒಬ್ಬರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 3 ಜೂನ್ 2023, 14:42 IST
Last Updated 3 ಜೂನ್ 2023, 14:42 IST

ಕೊಪ್ಪಳ: ತಾಲ್ಲೂಕಿನ ಇರಕಲ್ಲಗಡ ಹೋಬಳಿ ವ್ಯಾಪ್ತಿಯ ಗಂಗನಾಳ ಗ್ರಾಮದ ಮಕ್ಕಲ್ಲಪ್ಪ ಎಂಬುವರ ಮೇಲೆ ಶನಿವಾರ ಕರಡಿ ದಾಳಿ ಮಾಡಿದೆ. ಕಾಲಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಇರಕಲ್ಲಗಡ ಭಾಗದಲ್ಲಿ ಕರಡಿ ಹಾವಳಿ ವ್ಯಾಪಕವಾಗಿದೆ. ರಕ್ಷಣೆಗೆ ಕ್ರಮ ಕೈಗೊಳ್ಳಬೇಕು. ಕರಡಿ ಧಾಮ ನಿರ್ಮಾಣ ಮಾಡಬೇಕು ಎಂದು ಪದೇ ಪದೇ ಸರ್ಕಾರವನ್ನು ಒತ್ತಾಯಿಸುತ್ತಲೇ ಬಂದಿದ್ದರೂ ಪ್ರಯೋಜನವಾಗಿಲ್ಲ. ನಾವು ಗಾಯಗೊಳ್ಳುವುದು ತಪ್ಪುತ್ತಿಲ್ಲ ಎಂದು ಮುಕ್ಕಲ್ಲಪ್ಪ ಬೇಸರ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT