ADVERTISEMENT

ಭಾರತ ಬಂದ್: ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ರೈತ ಸಂಘಟನೆಗಳು

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2020, 4:25 IST
Last Updated 8 ಡಿಸೆಂಬರ್ 2020, 4:25 IST
   

ಕೊಪ್ಪಳ: ಭಾರತ ಬಂದ್ ಹಿನ್ನಲೆಯಲ್ಲಿ ಕೊಪ್ಪಳದಲ್ಲಿ ಬೆಳಿಗ್ಗೆ ರೈತ ಸಂಘಟನೆಗಳು ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ರೈತ ಸಂಘಟನೆಗಳು ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಿವೆ. ಪ್ರತಿಭಟನೆಯ ಕಾವು ಜೋರಾಗಿದ್ದು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಹೇಮಗುಡ್ಡ ಬಳಿಯ ಟೋಲ್ ಗೇಟ್ ಬಳಿ ರೈತ ಹಿತರಕ್ಷಣ ವೇದಿಕೆ ಪ್ರತಿಭಟನೆ ನಡೆಸುತ್ತಿದೆ.

ಟೈರ್‌ಗಳಿಗೆ ಬೆಂಕಿ ಹಚ್ಚಿ ಟೋಲ್‌ಗೇಟ್ ಬಂದ್ ಮಾಡಲಾಗಿದೆ. ರೈತ ಸಂಘಟನೆಗಳು ಮತ್ತು ಕನ್ನಡ ಪರ ಸಂಘಟನೆಗಳು ಕೊಪ್ಪಳ ಕೇಂದ್ರ ಬಸ್ ನಿಲ್ದಾಣದ ಮುಂದೆ ಪ್ರತಿಭಟನೆ ನಡೆಸುತ್ತಿವೆ. ಇದೇ ವೇಳೆ ಪ್ರಧಾನಿ ಮೋದಿ ಪ್ರತಿಕೃತಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.