ADVERTISEMENT

ರಸ್ತೆ ಅಪಘಾತ: ಬೈಕ್‌ ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 25 ಆಗಸ್ಟ್ 2021, 5:22 IST
Last Updated 25 ಆಗಸ್ಟ್ 2021, 5:22 IST

ಕನಕಗಿರಿ: ಸಮೀಪದ ಅರಳಹಳ್ಳಿ ಕ್ರಾಸ್ ಬಳಿ ಮಂಗಳವಾರ ಬೈಕ್‌ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿ ಬೈಕ್‌ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಯಲಬುರ್ಗಾ ತಾಲ್ಲೂಕಿನ ಕಟಗಿಹಳ್ಳಿ ಗ್ರಾಮದ ನಿವಾಸಿ ಹನುಮೇಶ‌ ಈಶಪ್ಪ ಹುಡೇಜಾಲಿ (30) ಮೃತ ಸವಾರ.

ಹನುಮೇಶ‌ ಗಂಗಾವತಿಯಿಂದ ಕನಕಗಿರಿ ಮಾರ್ಗವಾಗಿ ಕಟಗಿಹಳ್ಳಿ ಗ್ರಾಮಕ್ಕೆ ತೆರಳುತ್ತಿದ್ದರು. ಕಾರು ಕನಕಗಿರಿಯಿಂದ ಗಂಗಾವತಿ ಕಡೆಗೆ ಬರುತ್ತಿತ್ತು ಎನ್ನಲಾಗಿದೆ.

ADVERTISEMENT

ಈ ಸಂಬಂಧ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.