ADVERTISEMENT

ಸಚಿವರ ಭರವಸೆ: ಉಪವಾಸ ಕೈಬಿಟ್ಟ ಸಂಸದ ಸಂಗಣ್ಣ

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2023, 14:34 IST
Last Updated 7 ನವೆಂಬರ್ 2023, 14:34 IST
ಸಚಿವರಾದ ಕೃಷ್ಣ ಬೈರೇಗೌಡ ಹಾಗೂ ಶಿವರಾಜ ತಂಗಡಗಿ ಅವರು ಉಪವಾಸ ಸತ್ಯಾಗ್ರಹದಲ್ಲಿ ತೊಡಗಿದ್ದ ಸಂಸದ ಸಂಗಣ್ಣ ಕರಡಿ ಜೊತೆ ಚರ್ಚಿಸಿದರು
ಸಚಿವರಾದ ಕೃಷ್ಣ ಬೈರೇಗೌಡ ಹಾಗೂ ಶಿವರಾಜ ತಂಗಡಗಿ ಅವರು ಉಪವಾಸ ಸತ್ಯಾಗ್ರಹದಲ್ಲಿ ತೊಡಗಿದ್ದ ಸಂಸದ ಸಂಗಣ್ಣ ಕರಡಿ ಜೊತೆ ಚರ್ಚಿಸಿದರು   

ಕೊಪ್ಪಳ: ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಪರಿವರ್ತಕ ಸಹಿತ ಉಚಿತ ಮೂಲಸೌಕರ್ಯ ಒದಗಿಸುವ ಯೋಜನೆಯ ವಾಪಸ್‌ ಆದೇಶ ರದ್ದುಪಡಿಸಬೇಕು ಎಂದು ಅಗ್ರಹಿಸಿ ಬಿಜೆಪಿ ಸಂಸದ ಸಂಗಣ್ಣ ಕರಡಿ ಸೋಮವಾರ ಆರಂಭಿಸಿದ್ದ ಉಪವಾಸ ಸತ್ಯಾಗ್ರಹ ಮಂಗಳವಾರ ಮಧ್ಯಾಹ್ನ ಅಂತ್ಯಕಂಡಿತು.

ಪ್ರಗತಿ ಪರಿಶೀಲನಾ ಸಭೆ ನಡೆಸಲು ಇಲ್ಲಿಗೆ ಬಂದಿದ್ದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಪ್ರತಿಭಟನಾ ಸ್ಥಳಕ್ಕೆ ಬಂದು ಸಂಸದರಿಂದ ಸಮಸ್ಯೆ ಆಲಿಸಿದರು.

ಮುಖ್ಯಮಂತ್ರಿ ಮತ್ತು ಇಂಧನ ಸಚಿವ ಕೆ.ಜೆ. ಜಾರ್ಜ್ ಅವರೊಂದಿಗೆ ಫೋನ್‌ನಲ್ಲಿ ಮಾತನಾಡಿದ ಸಚಿವದ್ವಯರು, ‘ನವೆಂಬರ್‌ 9ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚಿಸಲಾಗುವುದು’ ಎಂದು ಭರವಸೆ ನೀಡಿದರು. ತಂಗಡಗಿ ಮತ್ತು ಬರ ಅಧ್ಯಯನ ಪ್ರವಾಸಕ್ಕೆ ಬಂದಿದ್ದ ಬಿಜೆಪಿ ಮುಖಂಡ ಕೆ.ಎಸ್‌. ಈಶ್ವರಪ್ಪ ಮನವೊಲಿಸಿದ್ದರಿಂದ ಸಂಸದ ಉಪವಾಸ ಕೈಬಿಟ್ಟರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.