ಕುಷ್ಟಗಿ: ತಾಲ್ಲೂಕಿನ ಮೆಣಸಗೇರಿ ಗ್ರಾಮದಲ್ಲಿ ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಬಾಲಕ ಮೃತಪಟ್ಟಿದ್ದಾನೆ.
ದೇವೇಂದ್ರಪ್ಪ ಯಲಗುರದಪ್ಪ ದಾಸಬಾಳ (14) ಮೃತ ಬಾಲಕ.
ತಮ್ಮದೇ ಜಮೀನಿನಲ್ಲಿರುವ ಕೃಷಿ ಹೊಂಡ ಮಳೆಯಿಂದ ಭರ್ತಿಯಾಗಿತ್ತು. ಎತ್ತುಗಳ ಮೈ ತೊಳೆಯಲು ಹೋಗಿ ಆಯತಪ್ಪಿ ನೀರಿನಲ್ಲಿ ಮುಳುಗಿದ್ದಾನೆ. ಕೃಷಿ ಹೊಂಡದ ಬಳಿ ಎತ್ತು ಮಾತ್ರ ಇತ್ತು. ಆದರೆ ಬಾಲಕ ನೀರಿನಲ್ಲಿ ಮುಳುಗಿದ್ದು ನಂತರ ತಿಳಿದಿದೆ. 8ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕನ ಅಕಾಲಿಕ ಮರಣಕ್ಕೆ ಪಾಲಕರಲ್ಲಿ ಶೋಕ ಮಡುಗಟ್ಟಿತ್ತು. ಈ ಸಂಬಂಧ ಇಲ್ಲಿಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.