ಕೊಪ್ಪಳ: ಭಾರತೀಯ ಸೇನೆಯಲ್ಲಿ 20 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ನಿವೃತ್ತಿಯಾಗಿ ಸ್ವಗ್ರಾಮಕ್ಕೆ ಬಂದ ದೇವೇಂದ್ರಪ್ಪ ಮಂಗಳೂರು ಅವರಿಗೆ ನಗರದಲ್ಲಿ ಶನಿವಾರ ಸಂಭ್ರಮದ ಸ್ವಾಗತ ಲಭಿಸಿತು.
ತೆರೆದ ಜೀಪಿನಲ್ಲಿ ನಗರದ ಪ್ರಮುಖ ಬೀದಿಗಳಲ್ಲಿ ದೇವೇಂದ್ರಪ್ಪ ಅವರ ಕುಟುಂಬದವರು, ಸ್ನೇಹಿತರು ಸ್ವಾಗತಿಸಿ ಬರಮಾಡಿಕೊಂಡರು. ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ವೇಳೆ ದಾರಿಯುದ್ದಕ್ಕೂ ಜನ ಶುಭ ಕೋರಿದರು. ಹೂ ಮಳೆ ಸುರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.