ಗಂಗಾವತಿ: ತಾಲ್ಲೂಕಿನ ಸಾಣಾಪುರ ಗ್ರಾಮದ ಕೆರೆಯಿಂದ ಸುತ್ತಮುತ್ತಲಿನ ಗ್ರಾಮಗಳಿಗೆ ಸರಬರಾಜು ಆಗುವ ಕುಡಿಯುವ ನೀರಿನ ಘಟಕಕ್ಕೆ ಜಿ.ಪಂ ಸಿಇಒ ಫೌಜಿಯಾ ತರುನ್ನುಮ್ ಶನಿವಾರ ಭೇಟಿ ನೀಡಿ ಪರಿಶೀಲನೆ ಮಾಡಿದರು.
ನಂತರ ಮಾತನಾಡಿದ ಅವರು, ‘ನೀರಿನ ಘಟಕದ ಸುತ್ತುಮುತ್ತ ಸ್ವಚ್ಛತೆಯನ್ನು ಕಾಪಾಡಬೇಕು. ಜೊತೆಗೆ ನಿತ್ಯ ನೀರು ಫಿಲ್ಟರ್ ಆಗುವ ಕುರಿತು ಪರಿಶೀಲನೆ ನಡೆಸಬೇಕು. ನೀರಿನ ಟ್ಯಾಂಕ್ಗಳನ್ನು 15 ದಿನಗಳಿಗೊಮ್ಮೆ ಸ್ವಚ್ಛಗೊಳಿಸಬೇಕು’ ಎಂದು ನೀರಾವರಿ ಇಲಾಖೆಗೆ ಸೂಚಿಸಿದರು. ತಾ.ಪಂ ಇಒ ಡಾ.ಡಿ.ಮೋಹನ್, ಸಾಣಾಪುರ ಗ್ರಾ.ಪಂ ಸಿಬ್ಬಂದಿ ವೆಂಕಟೇಶ್, ನಿಸಾರ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.