ADVERTISEMENT

ಆರೋಗ್ಯ ಕೇಂದ್ರದ ಆವರಣ ಸ್ವಚ್ಛತೆ

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2021, 5:22 IST
Last Updated 1 ಫೆಬ್ರುವರಿ 2021, 5:22 IST
ಕಾರಟಗಿ ತಾಲ್ಲೂಕಿನ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದ ಆವರಣವನ್ನು ಸ್ವಚ್ಚ ಮಾಡಲಾಯಿತು
ಕಾರಟಗಿ ತಾಲ್ಲೂಕಿನ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದ ಆವರಣವನ್ನು ಸ್ವಚ್ಚ ಮಾಡಲಾಯಿತು   

ಕಾರಟಗಿ: ‘ಸುತ್ತಮುತ್ತಲಿನ ಪರಿಸರವನ್ನು ರಕ್ಷಿಸಬೇಕು. ಉತ್ತಮ ವಾತಾವರಣ ನಿರ್ಮಾಣಕ್ಕೆ ಮುಂದಾಗಬೇಕು’ ಎಂದು ಬಿಜೆಪಿ ಯುವ ಮೋರ್ಚಾ ಕಾರಟಗಿ ಮಂಡಲ ಅಧ್ಯಕ್ಷ ಪಂಪನಗೌಡ ಜಂತಕಲ್ ಹೇಳಿದರು.

ತಾಲ್ಲೂಕಿನ ಸಿದ್ದಾಪುರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.

‘ಇದು ಪಕ್ಷದ ಕಾರ್ಯಕ್ರಮವಲ್ಲ. ಎಲ್ಲರೂ ನಮ್ಮೊಂದಿಗೆ ಕೈ ಜೋಡಿಸಬೇಕು’ ಎಂದರು.

ADVERTISEMENT

ಆವರಣ ಸ್ವಚ್ಛಗೊಳಿಸಲಾಯಿತು.

ಶಕ್ತಿ ಕೇಂದ್ರದ ಅಧ್ಯಕ್ಷ ಮಂಜುನಾಥ ಎಂ.ಪಿ, ವಿನಯ್ ಭಾವಿ, ನೆಕ್ಕಂಟಿ ಚಿನ್ನು, ಶಶಿ ಮ್ಯಾದರ್, ವೆಂಕಟೇಶ, ರಾಹುಲ್ ಪವಾರ್, ಮುದಕನಗೌಡ ಹಾಗೂ ಹಾಲನಗೌಡ ಸಿದ್ದಾಪುರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.