ADVERTISEMENT

ಚಾವಣಿ ಕುಸಿದು ಸಾವು: ಪರಿಹಾರ

​ಪ್ರಜಾವಾಣಿ ವಾರ್ತೆ
Published 10 ಜುಲೈ 2021, 4:11 IST
Last Updated 10 ಜುಲೈ 2021, 4:11 IST
ಯಲಬುರ್ಗಾ ತಾಲ್ಲೂಕು ಬಳೂಟಗಿ ಗ್ರಾಮದಲ್ಲಿ ಈಚೆಗೆ ಬಿರುಗಾಳಿಗೆ ಮನೆಯ ಚಾವಣಿ ಕುಸಿದು ಮೃತಪಟ್ಟಿದ್ದ ಶಿವಲೀಲಾ ಕುಟುಂಬಕ್ಕೆ ಪರಿಹಾರ ನೀಡಲಾಯಿತು
ಯಲಬುರ್ಗಾ ತಾಲ್ಲೂಕು ಬಳೂಟಗಿ ಗ್ರಾಮದಲ್ಲಿ ಈಚೆಗೆ ಬಿರುಗಾಳಿಗೆ ಮನೆಯ ಚಾವಣಿ ಕುಸಿದು ಮೃತಪಟ್ಟಿದ್ದ ಶಿವಲೀಲಾ ಕುಟುಂಬಕ್ಕೆ ಪರಿಹಾರ ನೀಡಲಾಯಿತು   

ಯಲಬುರ್ಗಾ: ತಾಲ್ಲೂಕಿನ ಬಳೂಟಗಿ ಗ್ರಾಮದಲ್ಲಿ ಈಚೆಗೆ ಬಿರುಗಾಳಿಗೆ ಮನೆಯ ಚಾವಣಿ ಕುಸಿದು ಮೃತಪಟ್ಟಿದ್ದ ಶಿವಲೀಲಾ ಶೇಖರಗೌಡ ದುಗ್ಗಲದ ಕುಟುಂಬಕ್ಕೆ ಸರ್ಕಾರದ ವತಿಯಿಂದ ₹5 ಲಕ್ಷ ಪರಿಹಾರ ನೀಡಲಾಯಿತು.

ಶಾಸಕ ಹಾಲಪ್ಪ ಆಚಾರ ಪರಿಹಾರದ ಆದೇಶ ಪ್ರತಿಯನ್ನು ಫಲಾನುಭವಿಗೆ ವಿತರಿಸಿದರು.

ಬಳಿಕ ಮಾತನಾಡಿ,‘ಅನಿರೀಕ್ಷಿತ ಘಟನೆಯಿಂದ ಕುಟುಂಬಕ್ಕೆ ಭಾರಿ ನಷ್ಟವಾಗಿದೆ. ಅಭಿವೃದ್ಧಿಗೆ ಪರಿಹಾರದ ಹಣ ಉಪಯೋಗಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ADVERTISEMENT

ತಹಶೀಲ್ದಾರ್ ಶ್ರೀಶೈಲ್ ತಳವಾರ ಮಾತನಾಡಿ,‘ಮೃತ ವ್ಯಕ್ತಿಯ ಪತಿಯ ಖಾತೆಗೆ ಆರ್‌ಟಿಜಿಎಸ್ ಮೂಲಕ ಹಣ ಸಂದಾಯ ಮಾಡಲಾಗಿದೆ’ ಎಂದು ಮಾಹಿತಿ ನೀಡಿದರು. ಸಿಎಚ್.ಪೊಲೀಸ್‍ ಪಾಟೀಲ, ವೀರಣ್ಣ ಹುಬ್ಬಳ್ಳಿ ಹಾಗೂ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.