ADVERTISEMENT

ಕಾಂಗ್ರೆಸ್‌ ಪಾದಯಾತ್ರೆ 7ರಂದು

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2022, 4:46 IST
Last Updated 6 ಆಗಸ್ಟ್ 2022, 4:46 IST

ಕೊಪ್ಪಳ: ಭಾರತ ಸ್ವಾತಂತ್ರ್ಯಗೊಂಡು 75 ವರ್ಷಗಳಾದ ಹಿನ್ನೆಲೆಯಲ್ಲಿ ಆ. 7ರಂದು ಬೆಳಿಗ್ಗೆ 10 ಗಂಟೆಗೆ ಶಾಸಕ ರಾಘವೇಂದ್ರ ಹಿಟ್ನಾಳ ನೇತೃತ್ವದಲ್ಲಿ ಜಿಲ್ಲೆಯ ಕಾಂಗ್ರೆಸ್‌ ನಾಯಕರು ಮುನಿರಾಬಾದ್‌ನ ಪಂಪಾವನದಿಂದ ಹುಲಗಿ ತನಕ ’ಸ್ವಾತಂತ್ರ್ಯೋತ್ಸವದ ನಡಿಗೆ’ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ.

ಸ್ವಾತಂತ್ರ್ಯಕ್ಕಾಗಿ ಹೋರಾಡಿ ಮಡಿದ ಮಹನೀಯರ ಹಾಗೂ ವೀರಯೋಧರ ನೆನಪಿಗಾಗಿ ಈ ಯಾತ್ರೆ ಹಮ್ಮಿಕೊಳ್ಳಲಾಗಿದೆ.

ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ಎಸ್. ತಂಗಡಗಿ, ಶಾಸಕ ಅಮರೇಗೌಡ ಬಯ್ಯಾಪುರ, ಮುಖಂಡರಾದ ಬಸವರಾಜ ರಾಯರಡ್ಡಿ, ಇಕ್ಬಾಲ್ ಅನ್ಸಾರಿ, ಶಿವರಾಮೇಗೌಡ್ರು, ಎಚ್‌.ಆರ್‌. ಶ್ರೀನಾಥ್‌, ಕರಿಯಣ್ಣ ಸಂಗಟಿ ಪಾಲ್ಗೊಳ್ಳಲಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.