ADVERTISEMENT

ಕೊಪ್ಪಳ: ಭಾರತ್ ಬಂದ್‍ಗೆ ಕಾಂಗ್ರೆಸ್ ಬೆಂಬಲ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2021, 3:44 IST
Last Updated 28 ಸೆಪ್ಟೆಂಬರ್ 2021, 3:44 IST
ಕೊಪ್ಪಳದಲ್ಲಿ ಭಾರತ್‌ ಬಂದ್‌ಗೆ ಸೋಮವಾರ ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಿತು. ಜಿ.ಪಂ ಮಾಜಿ ಅಧ್ಯಕ್ಷ ರಾಜಶೇಖರ ಹಿಟ್ನಾಳ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು
ಕೊಪ್ಪಳದಲ್ಲಿ ಭಾರತ್‌ ಬಂದ್‌ಗೆ ಸೋಮವಾರ ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಿತು. ಜಿ.ಪಂ ಮಾಜಿ ಅಧ್ಯಕ್ಷ ರಾಜಶೇಖರ ಹಿಟ್ನಾಳ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು   

ಕೊಪ್ಪಳ: ಕೇಂದ್ರ ಬಿಜೆಪಿಸರ್ಕಾರ ಮೂರು ಕೃಷಿ ಕಾನೂನುಗಳ ಮೂಲಕ ದೇಶದ ರೈತರನ್ನು ಸರ್ವನಾಶ ಮಾಡಲು ಹೊರಟಿರುವುದಕ್ಕೆ ದೇಶದ ನಾನಾ ಸಂಘಟನೆಗಳು ಹಮ್ಮಿಕೊಂಡಿರುವ ಹೋರಾಟಕ್ಕೆ ಕಾಂಗ್ರೆಸ್ ಪೂರ್ಣ ಬೆಂಬಲ ನೀಡಿಹೋರಾಟದಲ್ಲಿ ಪಾಲ್ಗೊಂಡಿದ್ದಾರೆ ಎಂದುಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶಿವರಾಜ ತಂಗಡಗಿ ತಿಳಿಸಿದರು.

ಕೃಷಿಕರು ದೇಶದ ಬೆನ್ನೆಲುಬು. ಆದರೆ ಬಿಜೆಪಿ ಅದನ್ನೇ ಮುರಿಯಲು ಹೊರಟಿದೆ. ಈಗ ಮಾಡಿರುವ ಎಡವಟ್ಟೇ ಸಾಕಾಗಿದ್ದು, ದೇಶದಲ್ಲಿ ಮಾರಲು ಏನು ಉಳಿಸಿದ್ದಾರೆ ಎಂದು ತಿಳಿಯದ ಜನ ಈಗ ರೈತರ ಬೆಳೆಗೆ ನೇರವಾಗಿ ಕನ್ನ ಹಾಕಿದ್ದಾರೆ ಎಂದುಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT