ADVERTISEMENT

‘ಅಧ್ಯಕ್ಷರ ಆಯ್ಕೆಗೆ ಹಿರಿಯರನ್ನು ಪರಿಗಣಿಸಿ’

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2021, 12:18 IST
Last Updated 21 ಫೆಬ್ರುವರಿ 2021, 12:18 IST

ಹನುಮಸಾಗರ: ‘ಮುಂದಿನ ದಿನಗಳಲ್ಲಿ ಹನುಮಸಾಗರದಲ್ಲಿ ಕೊಪ್ಪಳ ಜಿಲ್ಲಾ 12ನೇ ಸಾಹಿತ್ಯ ಸಮ್ಮೇಳನ ನಡೆಸಲು ಉದ್ದೇಶಿಸಲಾಗಿದೆ. ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಸರ್ವಾಧ್ಯಕ್ಷರನ್ನಾಗಿ ಹಿರಿಯರನ್ನು ಪರಿಗಣಿಸಬೇಕು’ ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಮಾಜಿ ಅಧ್ಯಕ್ಷ ಚಂದಪ್ಪ ಹಕ್ಕಿ ಒತ್ತಾಯಿಸಿದ್ದಾರೆ.

‘ಜಿಲ್ಲೆಯ ಹಿರಿಯ ಸಾಹಿತಿ, ಹೆಸರಾಂತ ಚಿಂತಕ ಅಲ್ಲಮಪ್ರಭು ಬೆಟ್ಟದೂರ ಅವರನ್ನು ಆಯ್ಕೆ ಮಾಡಬೇಕು. ಇಲ್ಲ ಈವರೆಗೂ ಜಿಲ್ಲಾ ಸಮ್ಮೇಳನಕ್ಕೆ ಮಹಿಳಾ ಸಾಹಿತಿಗಳನ್ನು ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಮಹಿಳಾ ಸಾಹಿತಿ ಸಾವಿತ್ರಿ ಮುಜುಮದಾರ ಅವರನ್ನು ಆಯ್ಕೆ ಮಾಡಿ ಆದ್ಯತೆ ನೀಡಬೇಕು’ ಎಂದು ಸಲಹೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT