ADVERTISEMENT

ಮಾರ್ಗಸೂಚಿ ಪಾಲನೆಗೆ ಮನವಿ

​ಪ್ರಜಾವಾಣಿ ವಾರ್ತೆ
Published 8 ಮೇ 2021, 11:19 IST
Last Updated 8 ಮೇ 2021, 11:19 IST
ಗಂಗಾವತಿ ತಾಲ್ಲೂಕಿನ ಸಣಾಪೂರ ಗ್ರಾಮದಲ್ಲಿ ಶನಿವಾರ ಸ್ಯಾನಿಟೈಸರ್ ಸಿಂಪಡಿಸಲಾಯಿತು
ಗಂಗಾವತಿ ತಾಲ್ಲೂಕಿನ ಸಣಾಪೂರ ಗ್ರಾಮದಲ್ಲಿ ಶನಿವಾರ ಸ್ಯಾನಿಟೈಸರ್ ಸಿಂಪಡಿಸಲಾಯಿತು   

ಸಣಾಪೂರ (ಗಂಗಾವತಿ): ತಾಲ್ಲೂಕಿನ ಸಣಾಪೂರ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಸಿಬ್ಬಂದಿ ಶನಿವಾರ ಸ್ಯಾನಿಟೈಸರ್‌ ಸಿಂ‍ಪಡಿಸಿದರು.

ಗ್ರಾಮ ಪಂಚಾಯಿತಿ ಸದಸ್ಯ ನಾಗೇಶ ಮಾತನಾಡಿ,‘ಸದ್ಯದ ಪರಿಸ್ಥಿತಿಯಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿದೆ. ಸಾರ್ವಜನಿಕರು ಎಚ್ಚೆತ್ತುಕೊಳ್ಳಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಮನೆಯಲ್ಲಿಯೇ ಇದ್ದು ನಿಯಮ ಪಾಲನೆ ಮಾಡಬೇಕು. ಅನಾವಶ್ಯಕವಾಗಿ ತಿರುಗಾಡಬಾರದು. ಸೋಂಕು ನಿಯಂತ್ರಣಕ್ಕೆ ಸದ್ಯ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗುತ್ತಿದೆ’ ಎಂದು ತಿಳಿಸಿದರು.

ಪ್ರಮುಖರಾದ ಕೆ.ಮಧು, ಶರೀಫ್, ಶಾಂತಕುಮಾರ, ನಾಗರಾಜ, ಚಿದಾನಂದ ಹಾಗೂ ಕೆ.ಶ್ರೀನಿವಾಸ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.