ADVERTISEMENT

ಕೋವಿಡ್‌-19 ಭೀತಿ: ಕನಕಗಿರಿ ಕನಕಾಚಲಪತಿ ರಥೋತ್ಸವ ರದ್ದು

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2020, 12:53 IST
Last Updated 13 ಮಾರ್ಚ್ 2020, 12:53 IST

ಕೊಪ್ಪಳ: ಇಲ್ಲಿನ ಐತಿಹಾಸಿಕ ಮತ್ತು ಪುರಾಣ ಪ್ರಸಿದ್ಧ ಜಿಲ್ಲೆಯ ಕನಕಗಿರಿ ಕನಕಾಚಲಪತಿ ರಥೋತ್ಸವ ಮಾ.16ರಂದು ನಡೆಯಲಿದ್ದು, ಕೋವಿಡ್‌-19 ವೈರಸ್ ಭೀತಿ ಹಿನ್ನೆಲೆಯಲ್ಲಿ ರದ್ದು ಮಾಡಲಾಗಿದೆ

ಜಾತ್ರೆಗೆ ಬರುವ ಭಕ್ತರ ಆರೋಗ್ಯ ದೃಷ್ಟಿಯಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಈಚೆಗೆ ನಡೆದ ಸಭೆಯಲ್ಲಿ ಜಿಲ್ಲಾಡಳಿತ ಸೂಚನೆ ನೀಡಿತ್ತು. ಆದರೆ ವೈರಸ್‌ ಭೀತಿ ವೇಗವಾಗಿ ಹರಡುತ್ತಿರುವುದರಿಂದ ಆತಂಕಗೊಂಡ ಸಂಘಟಕರು ರದ್ದು ಮಾಡುವ ಚಿಂತನೆಯಲ್ಲಿ ಇದ್ದಾರೆ. ಈ ಜಾತ್ರೆಗೆ ಹೊರ ಜಿಲ್ಲೆಗಳಿಂದಲೂ ಲಕ್ಷಾಂತರ ಭಕ್ತರು ಭಾಗವಹಿಸುತ್ತಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT