ADVERTISEMENT

‘ಕೋವಿಡ್ ಸರಪಳಿ ತುಂಡರಿಸಲು ನೆರವಾಗಿ’

​ಪ್ರಜಾವಾಣಿ ವಾರ್ತೆ
Published 4 ಜೂನ್ 2021, 13:16 IST
Last Updated 4 ಜೂನ್ 2021, 13:16 IST
ಹನುಮಸಾಗರದಲ್ಲಿ ಶುಕ್ರವಾರ ಕಾಂಗ್ರೆಸ್ ಪಕ್ಷದ ವತಿಯಿಂದ ಸ್ಯಾನಿಟೈಸರ್ ಹಾಗೂ ಮಾಸ್ಕ್ ವಿತರಿಸಲಾಯಿತು
ಹನುಮಸಾಗರದಲ್ಲಿ ಶುಕ್ರವಾರ ಕಾಂಗ್ರೆಸ್ ಪಕ್ಷದ ವತಿಯಿಂದ ಸ್ಯಾನಿಟೈಸರ್ ಹಾಗೂ ಮಾಸ್ಕ್ ವಿತರಿಸಲಾಯಿತು   

ಹನುಮಸಾಗರ: ‘ಪ್ರತಿಯೊಬ್ಬರೂ ಕೋವಿಡ್ ಮಾರ್ಗಸೂಚಿ ಪಾಲಿಸುವ ಮೂಲಕ ಕೋವಿಡ್ ಸರಪಳಿ ತುಂಡರಿಸಲು ನೆರವಾಗಬೇಕು’ ಎಂದು ಗ್ರಾಮ ಪಂಚಾಯಿತಿ ಸದಸ್ಯ ಫಾರುಕ್ ಡಾಲಾಯತ್ ಹೇಳಿದರು.

ಶುಕ್ರವಾರ ಪಟ್ಟಣದಲ್ಲಿ ಸಣ್ಣ ವ್ಯಾಪಾರಿಗಳು ಹಾಗೂ ಕೂಲಿಕಾರ್ಮಿಕರಿಗೆ ಕಾಂಗ್ರೆಸ್ ಪಕ್ಷದಿಂದ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸಿ ಮಾತನಾಡಿದರು.

ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮಂಜುನಾಥ ಹುಲ್ಲೂರ, ಸದಸ್ಯರಾದ ಸಂಗಮೇಶ ಕರಂಡಿ, ಪ್ರಶಾಂತ ಕುಲಕರ್ಣಿ, ಲಕ್ಷ್ಮೀ ಮಂಜುನಾಥ ಶಿರೋಳ, ಮುಖಂಡರಾದ ಈರಣ್ಣ ಬದಾಮಿ, ಶಬ್ಬೀರ್ ಹುನಗುಂದ, ಮುತ್ತಣ್ಣ, ಗುರಪ್ಪ, ಶಂಕ್ರಪ್ಪ, ಸೋಮನಾಥ ಚಿಲುಮಿ ಹಾಗೂ ನಾಗರಾಜ ಪಟ್ಟಣಶೆಟ್ಟಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.