ADVERTISEMENT

ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಭೇಟಿ

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2021, 7:25 IST
Last Updated 29 ಏಪ್ರಿಲ್ 2021, 7:25 IST
ಜಿಲ್ಲಾ ಆಸ್ಪತ್ರೆಗೆ ಗುರುವಾರ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್
ಜಿಲ್ಲಾ ಆಸ್ಪತ್ರೆಗೆ ಗುರುವಾರ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್    

ಕೊಪ್ಪಳ: ನಗರದ ಜಿಲ್ಲಾ ಆಸ್ಪತ್ರೆಗೆ ಗುರುವಾರ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್ ಕೋವಿಡ್ ಸೆಂಟರ್ ಗೆ ಭೇಟಿ ನೀಡಿ ಕೊರೊನಾ ಸೋಂಕಿತರ ಆರೋಗ್ಯ ವಿಚಾರಿಸಿದರು.

ಆಸ್ಪತ್ರೆಯ ಕುಂದು ಕೊರತೆಗಳ ಕುರಿತು ಸಂಬಂಧಿಸಿದ ವೈದ್ಯರಿಂದ ಮಾಹಿತಿ ಪಡೆದುಕೊಂಡರು.

ನಂತರ ಮಾತನಾಡಿದ ಅವರು, ಕೊರೊನಾ ಸೋಂಕಿತರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚನೆ ನೀಡಲಾಗಿದೆ. ಆಕ್ಸಿಜನ್ ಸೇರಿದಂತೆ ಎಲ್ಲ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲಾಗಿದೆ. ಜಿಲ್ಲಾಧಿಕಾರಿಗಳು ಈ ಕುರಿತು ಹೆಚ್ಚಿನ ನಿಗಾ ವಹಿಸಬೇಕು ಎಂದರು.

ADVERTISEMENT

ಲಸಿಕಾ ಅಭಿಯಾನವನ್ನು ಚುರುಕುಗೊಳಿಸಬೇಕು. ಆರೋಗ್ಯ ಇಲಾಖೆ ಸಿಬ್ಬಂದಿ ಹಗಲೂ ರಾತ್ರಿ ಶ್ರಮಿಸಬೇಕು ಎಂದರು.

ಸಂಸದ ಸಂಗಣ್ಣ ಕರಡಿ, ಜಿಲ್ಲಾ ಸರ್ಜನ್ ಡಾ.ದಾನರಡ್ಡಿ, ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಇದ್ದರು. ಜಿಲ್ಲಾಡಳಿತ ಭವನದಲ್ಲಿ ನಡೆಯುತ್ತಿರುವ ಕೊರೊನಾ ನಿರ್ವಹಣೆಯ ಕುರಿತು ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.