ಕುಷ್ಟಗಿ (ಕೊಪ್ಪಳ ಜಿಲ್ಲೆ): ಮತದಾರರ ದತ್ತಾಂಶ ಕಳವು ಪ್ರಕರಣದಿಂದ ಜನರ ಗಮನ ಬೇರೆ ಕಡೆ ಸೆಳೆಯಲು ಬಿಜೆಪಿ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಮಾಡಿಸಿದೆ ಎನ್ನುವ ನನ್ನ ಹೇಳಿಕೆಗೆ ಈಗಲೂ ಬದ್ದ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ಇಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿ ಮಂಗಳೂರಿನ ಪೊಲೀಸ್ ಆಯುಕ್ತರು ತನಿಖೆ ಮಾಡದೆ ಆರೋಪಿಯ ಬಗ್ಗೆ ಹೇಳಿಕೆ ನೀಡಿದ್ದಾರೆ. ಬಿಜೆಪಿ ಭ್ರಷ್ಟಾಚಾರ ಬಯಲಿಗೆ ಎಳೆದ ಕಾರಣ ಸ್ಫೋಟ ನಡೆದಿದೆ. ಜನರ ಗಮನ ಬೇರೆಡೆ ಸೆಳೆಯಲು ಹೀಗೆ ಮಾಡಲಾಗಿದೆ.
ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಘಟನೆಗಳಿಂದ ಭ್ರಷ್ಟಾಚಾರವನ್ನು ಮುಚ್ವಿ ಹಾಕಲು ಬಿಜೆಪಿ ಯತ್ನಿಸುತ್ತಿದೆ. ನನಗೆ ಯಾರ ಬೆಂಬಲ ಬೇಕಿಲ್ಲ. ನನ್ನ ಹೇಳಿಕೆಯನ್ನು ಈಗಲೂ ಸಮರ್ಥಿಸಿಕೊಳ್ಳುವೆ ಎಂದರು.
ಬಿಜೆಪಿಗೆ ಯಾವಾಗಲೂ ನಾನೇಟಾರ್ಗೆಟ್ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.