ADVERTISEMENT

ಒಬ್ಬೊಬ್ಬರೇ ತಿರುಗಾಡಬೇಡಿ

ಚಿರತೆ ಉಪಟಳ: ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಮಹ್ಮದ್‌ ರಫಿ ಸಲಹೆ

​ಪ್ರಜಾವಾಣಿ ವಾರ್ತೆ
Published 7 ಜನವರಿ 2021, 13:55 IST
Last Updated 7 ಜನವರಿ 2021, 13:55 IST
ಗಂಗಾವತಿ ತಾಲ್ಲೂಕಿನ ಸಣಾಪುರ ಗ್ರಾಮದಲ್ಲಿ ಜಾಗೃತಿ ಮೂಡಿಸಲಾಯಿತು
ಗಂಗಾವತಿ ತಾಲ್ಲೂಕಿನ ಸಣಾಪುರ ಗ್ರಾಮದಲ್ಲಿ ಜಾಗೃತಿ ಮೂಡಿಸಲಾಯಿತು   

ಗಂಗಾವತಿ: ‘ತಾಲ್ಲೂಕಿನಲ್ಲಿ ಚಿರತೆ ಉಪಟಳ ಹೆಚ್ಚಿದೆ. ಇಬ್ಬರು ಯುವಕರು ಬಲಿಯಾಗಿದ್ದಾರೆ. ಸಂಜೆ ವೇಳೆ ಗ್ರಾಮಸ್ಥರು ಒಬ್ಬೊಬ್ಬರೇ ತಿರುಗಾಡಬಾರದು’ ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಮಹ್ಮದ್‌ ರಫಿ ಸಲಹೆ ನೀಡಿದರು.

ತಾಲ್ಲೂಕು ಪಂಚಾಯಿತಿ ವತಿಯಿಂದ ತಾಲ್ಲೂಕಿನ ಸಣಾಪುರ, ಆನೆಗೊಂದಿ, ಮಲ್ಲಾಪುರ ಹಾಗೂ ಸಂಗಾಪುರ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಗುರುವಾರ ನಡೆದ ಜಾಗೃತಿ ಜಾಥಾದಲ್ಲಿ ಅವರು ಮಾತನಾಡಿದರು.

‘ಯಾರೂ ಒಂಟಿಯಾಗಿ ಮೊಬೈಲ್ ಬಳಸುತ್ತ ನಿರ್ಜನ ಪ್ರದೇಶದಲ್ಲಿ ತಿರುಗಾಡಬಾರದು. ಹೊಲ, ಗದ್ದೆಗಳ ಕೆಲಸಕ್ಕೆ ಕನಿಷ್ಠ ಇಬ್ಬರು ಸೇರಿ ಹೋಗಬೇಕು. ಕುಡಗೋಲು, ಕೊಡಲಿಯಂಥ ಆಯುಧ ತೆಗೆದುಕೊಂಡು ಹೋಗಬೇಕು’ ಎಂದರು.

ADVERTISEMENT

‘ಗುಡ್ಡದ ಪಾತ್ರದಲ್ಲಿ ಮನೆ ಇರುವವರು ಮಕ್ಕಳನ್ನು ಹೊರಗೆ ಬಿಡದೆ ಅವರ ಮೇಲೆ ಗಮನ ಇಡಬೇಕು. ಜಾಗ್ರತೆಯಿಂದ ಇರಬೇಕು’ ಎಂದು ಗ್ರಾಮಸ್ಥರಿಗೆ ತಿಳಿ ಹೇಳಿದರು.

ಆನೆಗೊಂದಿ ಹಾಗೂ ಸಣಾಪುರ ಗ್ರಾಮಗಳಲ್ಲಿ ಸಾಹಿತಿ ರಮೇಶ ಗಬ್ಬೂರು ತಂಡ ಜಾಗೃತಿ ಗೀತೆಗಳನ್ನು ಪ್ರಸ್ತುತಪಡಿಸಿತು.

ಶಿಶು ಅಭಿವೃದ್ದಿ ಯೋಜನಾಧಿಕಾರಿ ಗಂಗಪ್ಪ, ಆನೆಗೊಂದಿ ಹಾಗೂ ಸಣಾಪುರ ಪಿಡಿಒಗಳಾದ ಕೃಷ್ಣಪ್ಪ, ಬಸವರಾಜ ಗೌಡರ್, ಕರ ವಸೂಲಿಗಾರ ರಾಘವೇಂದ್ರ, ಹಾಗೂ ಚಾರಣ ಬಳಗದ ಡಾ.ಶಿವಕುಮಾರ ಮಾಲಿಪಾಟೀಲ ಹಾಗೂ ಮಂಜುನಾಥ ಗುಡ್ಲಾನೂರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.