ಕೊಪ್ಪಳ: ‘ಅಯೋಧ್ಯೆರಾಮಮಂದಿರದ ವಿಚಾರದ ಬಗ್ಗೆ ಸುಪ್ರೀಂ ಕೋರ್ಟ್ನ ತೀರ್ಪು ನವೆಂಬರ್ 17ರಂದು ಹೊರಬರುವ ಸಂಭವವಿದ್ದು, ಸಾಮಾಜಿಕ ಜಾಲತಾಣ ಬಳಕೆಗೆ ಸಂಬಂಧಿಸಿದಂತೆ ಕೆಲವು ನಿಯಮಗಳು ಇಂದಿನಿಂದಲೆ ಅನ್ವಯವಾಗುತ್ತವೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಸಂಗೀತಾ ಅವರು ಸೂಚನೆ ನೀಡಿದ್ದಾರೆ.
ವ್ಯಾಟ್ಸ್ ಆ್ಯಪ್, ಫೇಸ್ಬುಕ್, ಟ್ವಿಟ್ಟರ್ ಸೇರಿ ದಂತೆ ಎಲ್ಲ ಸಾಮಾಜಿಕ ಮಾಧ್ಯಮಗಳ ಮೇಲೆ ನಿಗಾ ಇಡಲಾಗುವುದು. ತಪ್ಪು ಸಂದೇಶವನ್ನು ಯಾರಿಗೂ ಕಳುಹಿಸಬೇಡಿ ಎಂಬುದನ್ನು ಗಮನಿಸಿ. ನಿಮ್ಮ ಮಕ್ಕಳು, ಸಹೋದರರು, ಸಂಬಂಧಿಕರು, ಸ್ನೇಹಿತರು, ಪರಿಚಯಸ್ಥರು ಇತ್ಯಾದಿ ಎಲ್ಲರೂ ಈ ಮಾಹಿತಿ ನೋಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.
ಜಾಲತಾಣಗಳಲ್ಲಿ ಯಾವುದೇ ಆಕ್ಷೇಪಾರ್ಹ ಪೋಸ್ಟ್ಗಳು ಅಥವಾ ವಿಡಿಯೊಗಳನ್ನು ಕಳುಹಿಸಬೇಡಿ. ಈ ಸಮಯದಲ್ಲಿ ಯಾವುದೇ ರಾಜಕೀಯ ಅಥವಾ ಧಾರ್ಮಿಕ ವಿಷಯದ ಬಗ್ಗೆ ನಿಂದನೀಯ ಸಂದೇಶವನ್ನು ಬರೆಯುವುದು ಅಥವಾ ಕಳುಹಿಸುವುದು ಅಪರಾಧ. ಹಾಗೆ ಮಾಡುವುದರಿಂದ ವಾರಂಟ್ ಇಲ್ಲದೆ ಬಂಧನಕ್ಕೆ ಕಾರಣವಾಗಬಹುದು. ಪೊಲೀಸ್ ಅಧಿಸೂಚನೆಯನ್ನು ಹೊರಡಿಸುತ್ತದೆ. ನಂತರ ಸೈಬರ್ ಅಪರಾಧದ ಮೂಲಕ ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಇದು ದೇಶದ ತುಂಬಾ ಗಂಭೀರವಾದ ವಿಷಯ. ಸಾಮಾಜಿಕ ಜಾಲತಾಣದ ಗುಂಪಿನ ಎಲ್ಲ ಸದಸ್ಯರು, ಈ ವಿಷಯದ ಬಗ್ಗೆ ಆಳವಾಗಿ ಯೋಚಿಸಿ. ತಪ್ಪಾದ ಸಂದೇಶ ಕಳುಹಿಸದಂತೆ ಎಚ್ಚರಿಕೆ ವಹಿಸಬೇಕು. ಎಲ್ಲರಿಗೂ ತಿಳಿಸಿ ಮತ್ತು ಈ ವಿಷಯದ ಬಗ್ಗೆ ಗಮನವಿರಲಿ. ಈ ಕುರಿತು ಜಾಲತಾಣಗಳಲ್ಲಿ ಜಾಗೃತಿ ಮೂಡಿಸಿ ಎಂದು ಅವರು ಕೋರಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.