ADVERTISEMENT

‘ದುಡಿಯೋಣ ಬಾ’ ಸದುಪಯೋಗ ಪಡೆಯಿರಿ

ನಾಲಾ ಹೂಳೆತ್ತುವ ಕಾಮಗಾರಿಗೆ ಚಾಲನೆ: ಗ್ರಾ.ಪಂ ಅಧ್ಯಕ್ಷ ರೇವಣಸಿದ್ದನಗೌಡ ಪೊಲೀಸ್ ಪಾಟೀಲ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2021, 11:44 IST
Last Updated 11 ಏಪ್ರಿಲ್ 2021, 11:44 IST
ಕುಕನೂರು ತಾಲ್ಲೂಕಿನ ಹಿರೇಬಿಡನಾಳದಲ್ಲಿ ನರೇಗಾ ಕೆಲಸ ಮಾಡುತ್ತಿರುವ ಕೂಲಿ ಕಾರ್ಮಿಕರು
ಕುಕನೂರು ತಾಲ್ಲೂಕಿನ ಹಿರೇಬಿಡನಾಳದಲ್ಲಿ ನರೇಗಾ ಕೆಲಸ ಮಾಡುತ್ತಿರುವ ಕೂಲಿ ಕಾರ್ಮಿಕರು   

ಹಿರೇಬಿಡನಾಳ (ಕುಕುನೂರು): ‘ನರೇಗಾ ಯೋಜನೆ ಅಡಿ ಗ್ರಾಮೀಣರಿಗೆ ನಿರಂತರವಾಗಿ ಕೆಲಸ ಒದಗಿಸುವ ಸಲುವಾಗಿ ‘ದುಡಿಯೋಣ ಬಾ’ ಅಭಿಯಾನ ಆರಂಭಿಸಲಾಗಿದೆ. ಇದರ ಸದುಪಯೋಗ ಪಡೆಯಬೇಕು’ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ರೇವಣಸಿದ್ದನಗೌಡ ಪೊಲೀಸ್ ಪಾಟೀಲ ಮನವಿ ಮಾಡಿದರು.

ತಾಲ್ಲೂಕಿನ ಹಿರೇಬಿಡನಾಳ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆಯ ‘ದುಡಿಯೋಣ ಬಾ’ ಅಭಿಯಾನದ ಪ್ರಯುಕ್ತ ಕೈಗೆತ್ತಿಕೊಳ್ಳಲಾಗಿರುವ ನಾಲಾ ಹೂಳೆತ್ತುವ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.

ತಾಲ್ಲೂಕು ಪಂಚಾಯಿತಿ ಐಇಸಿ ಸಂಯೋಜಕ ಶರಣಪ್ಪ ಹಾಳಕೇರಿ ಮಾತನಾಡಿ,‘ನರೇಗಾ ಯೋಜನೆಯಿಂದ ಹೊರಗುಳಿದ ಕುಟುಂಬಗಳನ್ನು ಸಕ್ರಿಯವಾಗಿ ಭಾಗವಹಿಸುವಂತೆ ಮಾಡುವುದು ಅಭಿಯಾನದ ಉದ್ದೇಶ. ಪ್ರತಿದಿನಕ್ಕೆ ₹ 289 ಕೂಲಿ ಸಿಗಲಿದೆ‌. ಕೆಲಸಕ್ಕೆ ತಕ್ಕ ಕೂಲಿ ದೊರೆಯಲಿದೆ’ ಎಂದು ಹೇಳಿದರು.

ADVERTISEMENT

ಉಪಾಧ್ಯಕ್ಷೆ ಕನಕವ್ವ, ಪಿಡಿಒ ದೊಡ್ಡಬಸಮ್ಮ, ದೇವಿಂದ್ರಪ್ಪ ಹಾಗೂ ಯಮನೂರಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.