ADVERTISEMENT

ಉಜ್ಜನಕೊಪ್ಪಗೆ ರಾಷ್ಟ್ರಪತಿ ಸೇವಾ ಪದಕ

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2020, 13:34 IST
Last Updated 26 ಡಿಸೆಂಬರ್ 2020, 13:34 IST
ರುದ್ರೇಶ ಉಜ್ಜನಕೊಪ್ಪ
ರುದ್ರೇಶ ಉಜ್ಜನಕೊಪ್ಪ   

ಗಂಗಾವತಿ: 2018-19ನೇ ಸಾಲಿನ ‘ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ’ಕ್ಕೆ ಡಿವೈಎಸ್ಪಿ ರುದ್ರೇಶ ಉಜ್ಜನಕೊಪ್ಪ ಆಯ್ಕೆಯಾಗಿದ್ದಾರೆ.

ಜನವರಿ 7 ರಂದು ಬೆಂಗಳೂರಿನ ಗಾಜಿನ ಅರಮನೆ ಆವರಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪದಕ ಪ್ರದಾನ ಮಾಡಲಾಗುತ್ತದೆ.

ಅವರು 22 ವರ್ಷಗಳಿಂದ ಪೊಲೀಸ್‌ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕ್ರಿಯಾತ್ಮಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಸೇವಾ ಹಿರಿತನ ಹಾಗೂ ಕಾರ್ಯದಕ್ಷತೆ ಪರಿಗಣಿಸಿ ಅವರನ್ನು ಪದಕಕ್ಕೆ ಆಯ್ಕೆ ಮಾಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.