ಗಂಗಾವತಿ: ತಾಲ್ಲೂಕು ಆಡಳಿತದ ವತಿಯಿಂದ ನಗರದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿರುವ ಮಂಥನ ಸಭಾಂಗಣದಲ್ಲಿ ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯ ಹಿನ್ನೆಲೆ ಅಧಿಕಾರಿಗಳಿಗೆ ತರಬೇತಿ ನೀಡಲಾಯಿತು.
ಈ ವೇಳೆ ತಹಶೀಲ್ದಾರ್ ಎಂ.ರೇಣುಕಾ ಮಾತನಾಡಿ‘ಎಲ್ಲಾ ಅಧಿಕಾರಿಗಳು ಚುನಾವಣೆಯ ಕುರಿತು ಸರಿಯಾದ ತರಬೇತಿ ಪಡೆದುಕೊಳ್ಳಬೇಕು. ಯಾವುದೇ ಗೊಂದಲಗಳು ಇದ್ದರೆ, ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಚುನಾವಣೆಯನ್ನು ಪಾರದರ್ಶಕವಾಗಿ ನಡೆಸಿ, ಈ ಹಿನ್ನೆಲೆಯಲ್ಲಿ ಸರ್ಕಾರ ಹೊರಡಿಸುವ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ನಂತರ ಗ್ರಾಮ ಪಂಚಾಯಿತಿ ಚುನಾವಣೆ ಕುರಿತು ಎಲ್ಲಾ ಅಧಿಕಾರಿಗಳಿಗೆ ವಿಡಿಯೊ ಮೂಲಕ ಚುನಾವಣಾಧಿಕಾರಿಗಳು ಮಾಹಿತಿ ನೀಡಿದರು.
ಈ ವೇಳೆ ಕಂದಾಯ ನಿರೀಕ್ಷಕರಾದ ಮಂಜುನಾಥ ಹಿರೇಮಠ, ಮಹೇಶ ದಲಾಲ್ ಹಾಗೂ ವಿವಿಧ ಶಾಲೆಗಳ ಶಿಕ್ಷಕರು
ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.