ADVERTISEMENT

‘ಕನ್ನಡ ಭಾಷೆ ಉಳಿಸಿ ಬೆಳೆಸಿ’

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2021, 11:29 IST
Last Updated 2 ನವೆಂಬರ್ 2021, 11:29 IST
ಕುಕುನೂರಿನ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ತಹಶೀಲ್ದಾರ್ ಕಿರಣ್ ಕುಮಾರ್ ಕುಲಕರ್ಣಿ ಅವರು ಸಸಿಗೆ ನೀರೆರೆಯುವ ಮೂಲಕ ಚಾಲನೆ ನೀಡಿದರು
ಕುಕುನೂರಿನ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ತಹಶೀಲ್ದಾರ್ ಕಿರಣ್ ಕುಮಾರ್ ಕುಲಕರ್ಣಿ ಅವರು ಸಸಿಗೆ ನೀರೆರೆಯುವ ಮೂಲಕ ಚಾಲನೆ ನೀಡಿದರು   

ಕುಕನೂರು: ಕರ್ನಾಟಕ ರಾಜ್ಯದಲ್ಲಿ ಅನ್ಯ ಭಾಷೆಗಳ ಹಾವಳಿ ಅಧಿಕವಾಗಿದೆ. ನಾವೆಲ್ಲರೂ ಮಾತೃಭಾಷೆ ಭಾಷೆಯನ್ನು ಉಳಿಸಿ, ಬೆಳೆಸಬೇಕಿದೆ ಎಂದು ತಹಶೀಲ್ದಾರ್ ಕಿರಣ್ ಕುಮಾರ್ ಕುಲಕರ್ಣಿ ಹೇಳಿದರು ಹೇಳಿದರು.

ಇಲ್ಲಿನ ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ಏರ್ಪಡಿಸಿದ್ದ 66ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅದರಲ್ಲೂ ಉತ್ತರ ಕರ್ನಾಟಕದ ಕನ್ನಡ ಭಾಷೆಗೆ ಅದರದ್ದೇ ಆದ ಗತ್ತು-ಗಮ್ಮತ್ತಿದೆ. ಆ ಸೊಗಡನ್ನು ನಮ್ಮ ಜೀವನದುದ್ದಕ್ಕೂ ಬಳಸೋಣ ಎಂದರು.

ADVERTISEMENT

ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜುನಾಥ್ ಬೆಲ್ಲದ್, ಬಿಆರ್‌ಸಿ ಶರಣಪ್ಪ ಕೊಪ್ಪದ, ಗ್ರೇಡ್-2 ತಹಶೀಲ್ದಾರ್ ಗವಿಸಿದ್ದಪ್ಪ, ಅಲ್ಲಾಭಕ್ಷಿ ಕಲ್ಲೂರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.