ADVERTISEMENT

‘ಪರಿಸರ ಸಂರಕ್ಷಣೆ ನಿರಂತರವಾಗಿರಲಿ’

​ಪ್ರಜಾವಾಣಿ ವಾರ್ತೆ
Published 5 ಜೂನ್ 2020, 13:46 IST
Last Updated 5 ಜೂನ್ 2020, 13:46 IST
ಕುಕನೂರಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶುಕ್ರವಾರ ವಿಶ್ವ ಪರಿಸರ ದಿನ ಆಚರಿಸಲಾಯಿತು
ಕುಕನೂರಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶುಕ್ರವಾರ ವಿಶ್ವ ಪರಿಸರ ದಿನ ಆಚರಿಸಲಾಯಿತು   

ಕುಕನೂರು: ‘ಪರಿಸರ ದಿನಾಚರಣೆ ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು. ಪರಿಸರ ಸಂರಕ್ಷಣೆಯ ಪ್ರಕ್ರಿಯೆ ನಿರಂತರವಾಗಿರಬೇಕು‘ ಎಂದು ಆಡಳಿತ ವೈದ್ಯಾಧಿಕಾರಿ ಡಾ. ಸೀಮಾ ಮಾಬಳೆ ಹೇಳಿದರು.

ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶುಕ್ರವಾರ ಸಸಿ ನಡುವ ಮೂಲಕ ವಿಶ್ವ ಪರಿಸರ ದಿನಾಚರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಪರಿಸರ ಸಮತೋಲನ ಕಾಯ್ದುಕೊಳ್ಳಲು ಅರಣ್ಯ ಸಹಕಾರಿ. ಪರಿಸರದ ಅಗತ್ಯತೆ, ಕಾಳಜಿ, ಅರಿವು ಹೊಂದಿರುವುದರ ಜತೆಗೆ, ಪರಿಸರಕ್ಕೆ ನೀಡುತ್ತಿರುವ ಕೊಡುಗೆ ಏನು ಎಂಬುದನ್ನು ಮನವರಿಕೆ ಮಾಡಿಕೊಂಡು ಅದರ ಉಳಿವಿಗಾಗಿ ಜಾಗೃತರಾಗಬೇಕು’ ಎಂದರು.

ADVERTISEMENT

ಪ್ರತಿಯೊಬ್ಬರೂ ಗಿಡವನ್ನು ನೆಟ್ಟು, ಅವುಗಳನ್ನು ಉಳಿಸಿ ಬೆಳೆಸಲು ಸಂಕಲ್ಪ ಮಾಡಬೇಕು. ಶಿಕ್ಷಕರು ದಿನಕ್ಕೆ ಐದು ನಿಮಿಷವಾದರೂ ಮಕ್ಕಳಿಗೆ ಪರಿಸರದ ಬಗ್ಗೆ ಅರಿವು ಮೂಡಿಸಬೇಕು. ಪೋಷಕರು ಸಹ ತಮ್ಮ ಮಕ್ಕಳನ್ನು ಬೆಳೆಸುವ ರೀತಿಯಲ್ಲಿಯೇ ತಮ್ಮ ಸುತ್ತಮುತ್ತಲಿನ ವಾತಾವರಣದಲ್ಲಿ ಗಿಡ ಮರಗಳನ್ನು ನೆಟ್ಟು ಪೋಷಿಸಬೇಕು ಎಂದು ಕರೆ ನೀಡಿದರು.

ಡಾ. ನಾಗೇಂದ್ರ, ಡಾ. ಪ್ರವೀಣ, ಡಾ. ಪ್ರೀಯಾಂಕ ಕಂಪ್ಲಿ, ಹಿರಿಯ ಆರೋಗ್ಯ ಸಹಾಯಕ ಚನ್ನಬಸಯ್ಯ ಸರಗಣಾಚಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.